ಕರಾವಳಿಪುತ್ತೂರು

ಪುತ್ತೂರು : ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ, ಅಮ್ಮನನ್ನು ಕಳೆದುಕೊಂಡು ಇಬ್ಬರು ಮಕ್ಕಳು ಅನಾಥ

304

ನ್ಯೂಸ್ ನಾಟೌಟ್ : ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ನಡೆದಿದೆ.ಇವರು ಬೆಳ್ತಂಗಡಿ ತಾಲೂಕಿನ ಪುದುವೆಟ್ಟುಗ್ರಾಮದ ನಿವಾಸಿಯಾಗಿದ್ದು, ತವರು ಮನೆಯವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತ ಮಹಿಳೆಯನ್ನು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಎಂದು ಗುರುತಿಸಲಾಗಿದೆ.ಪುತ್ತೂರಿನ ಬೆಟ್ಟಂಪಾಡಿಯ ಗುಮ್ಮಟಗದ್ದೆಯ ಬಾಲಕೃಷ್ಣ ಅವರ ಪುತ್ರಿ ಪುಣ್ಯಶ್ರೀಯವರನ್ನು 2017ರ ಜನವರಿ 1ಕ್ಕೆ ಬೆಳ್ತಂಗಡಿಯ ಪುರುಷೋತ್ತಮ ಅವರಿಗೆ ವಿವಾಹ ಮಾಡಿಸಿದ್ದರು. ಪುರುಷೋತ್ತಮ ಮತ್ತು ಪುಣ್ಯಶ್ರಿ ದಂಪತಿಗೆ ಇಬ್ಬರು ಮಕ್ಕಳಿದ್ದು, ಕಳೆದ ಎ. 4ರಂದು ತವರು ಮನೆಗೆ ಪುಣ್ಯಶ್ರೀ ಬಂದಿದ್ದರು.

ಎ. 10ರಂದು ಅವರು ಪತಿಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದರು. ರಾತ್ರಿ ವೇಳೆ ಚಿಕ್ಕಮ್ಮ ಲತಾ ಅವರ ಮೊಬೈಲ್‌ಗೆ ಕರೆ ಮಾಡಿ ತಾನು ಸಾಯುವುದಾಗಿ ಹೇಳಿ ಬಾವಿಗೆ ಹಾರಿದ್ದರು. ಈ ಕುರಿತು ಮಾಹಿತಿ ಅರಿತು ಪುಣ್ಯಶ್ರೀಯವರನ್ನು ಬಾವಿಯಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ ಆಗಲೇ ಮೃತಪಟ್ಟಿದ್ದರು ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಸಂಪ್ಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಪ್ರಕರಣ ದಾಖಲಿಸಿದ್ದಾರೆ.

See also  ಅರಂತೋಡು: ಪ್ರತಿ ದಿನ ಬೆಳ್ ಬೆಳಗ್ಗೆ ವೈಎಂಕೆ ಹತ್ರ ಕರೆಂಟ್ ತಪ್ಪಿಸೋರು ಯಾರು..?ಅಕ್ರಮ ಮರಳು ಸಾಗಾಟದಾರರ ಕೈವಾಡದ ಶಂಕೆ, ಪೊಲೀಸ್ ಇಲಾಖೆ, ಗಣಿ ಇಲಾಖೆ ಈ ದಿವ್ಯ ಮೌನವೇಕೆ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget