ಕರಾವಳಿ

ಕರಾವಳಿಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸುವರ್ಣಾವಕಾಶ, ಕ್ರೀಡಾಪಟುಗಳಿಂದ ನಗದು ಬಹುಮಾನಕ್ಕೆ ಅರ್ಜಿ ಆಹ್ವಾನ

170

ನ್ಯೂಸ್ ನಾಟೌಟ್: 2021-2022ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವನ್ನು ಅಧಿಕೃತವಾಗಿ ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಹಾಗೂ ಭಾರತವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ನವೆಂಬರ್ 25 ರೊಳಗೆ ಮಂಗಳಾ ಕ್ರೀಡಾಂಗಣ ಕಚೇರಿಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣವನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  NMC ಪದವಿ ಕಾಲೇಜು ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ;ವಿದ್ಯೆಯೆಂದರೆ ಕೇವಲ ಸಾಕ್ಷಾರತೆಯಲ್ಲ,ಸಂಸ್ಕಾರ- ಎಂ.ಬಿ ಸದಾಶಿವ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget