ಕರಾವಳಿ

ಉಪ್ಪಿನಂಗಡಿ: ಬಸ್ಸಿನಲ್ಲಿ ಮಗುವನ್ನು ಎತ್ತಿಕೊಂಡು ಬಂದ ಮಹಿಳೆಗೆ ಸೀಟು ಬಿಟ್ಟು ಕೊಟ್ಟ ಮಹಿಳೆ, ತಾನು ನಿಂತಿರುವ ವೇಳೆ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡು ಮೃತ್ಯು..!

143

ನ್ಯೂಸ್‌ ನಾಟೌಟ್‌ :  ಬಸ್ಸಿನಲ್ಲಿ ಮಗುವನ್ನು ಎತ್ತಿಕೊಂಡು ಬಂದ ಮಹಿಳೆಗೆ ತನ್ನ ಸೀಟು ಬಿಟ್ಟುಕೊಟ್ಟು ತಾನು ನಿಂತಿದ್ದ ವೇಳೆ ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಉಪ್ಪಿನಂಗಡಿ ಬಳಿಯ ನಿನ್ನಿಕ್ಕಲ್‌ ನಿವಾಸಿ, ಮಾಧವ ಶಿಶು ಮಂದಿರದ ಮಾತೃ ಮಂಡಳಿಯ ಸದಸ್ಯೆ ರಾಧಾ ನಿನ್ನಿಕ್ಕಲ್‌ (66) ಅವರು ಕೆಲವು ದಿನಗಳ ಹಿಂದೆ ಮಾಣಿಯಲ್ಲಿ ಸಂಭವಿಸಿದ ಬಸ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು.ಈ ವೇಳೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಫ‌ಲಿಸದ ಕಾರಣ ಬುಧವಾರ ಮನೆಗೆ ಕರೆತರಲಾಗಿತ್ತು. ಮನೆ ತಲುಪುತ್ತಿದ್ದಂತೆಯೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ಪತಿ ಕೆಲವು ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು. ಇವರು ವನಿತಾ ಭಜನ ಮಂಡಳಿ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದು ಬಂದಿದೆ.

See also  ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತ ಶ್ವಾಸಕೋಶದ ಆರೋಗ್ಯ ತಪಾಸಣೆ ಮತ್ತು ಸಮಾಲೋಚನಾ ಶಿಬಿರ
  Ad Widget   Ad Widget   Ad Widget   Ad Widget   Ad Widget   Ad Widget   Ad Widget