Latestಕರಾವಳಿರಾಜಕೀಯ

‘ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’; ಬಿಜೆಪಿಯವರಿಗೆ ಒಂದು ಮಾತು,ಶಾಂತಿ ಭಂಗ‌ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ‌-ಸಚಿವ ದಿನೇಶ್ ಗುಂಡೂರಾವ್ 

459

ನ್ಯೂಸ್‌ ನಾಟೌಟ್:  ಮಂಗಳೂರಿನ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ‌ ಕೃತ್ಯ ಅತ್ಯಂತ ಭೀಕರ ಮತ್ತು ಆಘಾತಕಾರಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಈ ಘಟನೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ.ಮೇಲ್ನೋಟಕ್ಕೆ ‌ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಇದೆಯೆಂದಾದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ., ಯಾರ ತುಷ್ಠೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ‌ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ‌ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ.ದ್ವೇಷ ಹರಡುವ ಮೂಲಕ‌, ಪ್ರಚೋದಿಸುವ ಮೂಲಕ‌ ಮಂಗಳೂರಿನಲ್ಲಿ ಶಾಂತಿ ಭಂಗ‌ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ‌. ಜವಾಬ್ದಾರಿಯಿಂದ ವರ್ತಿಸಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

See also  ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣ: ಸಾಲುಮರದ ತಿಮ್ಮಕ್ಕನ ಸರ್ಕಾರಿ ಕಾರು ಬಳಸಿಕೊಂಡರಾ ಆರೋಪಿಗಳು? ಗೋವಿಂದಬಾಬು ಪೂಜಾರಿಗೆ ನೋಟಿಸ್‌ ನೀಡಿದ್ದೇಕೆ ಸಿಸಿಬಿ?
  Ad Widget   Ad Widget   Ad Widget   Ad Widget   Ad Widget   Ad Widget   Ad Widget