ಕರಾವಳಿಕೊಡಗುಸುಳ್ಯ

ಬೆಳ್ತಂಗಡಿ: ಪತ್ನಿ,ಮಗನನ್ನು ರಕ್ಷಿಸಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವು

217

ನ್ಯೂಸ್ ನಾಟೌಟ್ : ನೇತ್ರಾವತಿ ನದಿ ನೀರಿನಲ್ಲಿ ಮುಳುಗಿದ್ದ ಪತ್ನಿ ಹಾಗೂ ಮಗನನ್ನು ರಕ್ಷಿಸಲು ಹೋಗಿ ತಾನು ನೀರಿಗೆ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸಮೀಪದಿಂದ ಸೋಮವಾರ ವರದಿಯಾಗಿದೆ.ಹಾಸನದ ಹರಳಹಳ್ಳಿಯ ಕೃಷ್ಣಪ್ಪ ಗೌಡ ಎಚ್‌.ಟಿ. (52) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ಹಾಸನದ ಹರಳಹಳ್ಳಿಯ ಕೃಷ್ಣಪ್ಪ ಗೌಡ ಎಚ್‌.ಟಿ. ತನ್ನ ಪತ್ನಿ ಹಾಗೂ ಮಗನೊಂದಿಗೆ ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು. ಈ ವೇಳೆ ಪತ್ನಿ ಹಾಗೂ ಮಗನಿಗೆ ನೀರಿನಿಂದ ಮೇಲೆ ಬರಲಾಗದೆ ಚಡಪಡಿಸುತ್ತಿದ್ದರು. ಅವರನ್ನು ಮೇಲೆಳೆದು ಅವರ ಪ್ರಾಣ ರಕ್ಷಿಸಿದ ಕೃಷ್ಣಪ್ಪ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮೃತದೇಹವನ್ನು ನದಿಯಿಂದ ಮೇಲೆತ್ತಲು ವಿಪತ್ತು ನಿರ್ವಹಣ ತಂಡದ ಸದಸ್ಯರು ಸಹಕರಿಸಿದರು.

See also  ಕಾರ್ಕಳ: ಮುಂದಿನ ನಾಲ್ಕು ತಿಂಗಳ ಒಳಗಾಗಿ 'ಪರಶುರಾಮ್ ಥೀಂ ಪಾರ್ಕ್' ಕಾಮಗಾರಿ ಮುಗಿಸೋಕೆ ಹೈಕೋರ್ಟ್ ಆದೇಶ, ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ವಿಚಾರಕ್ಕೆ ಈಗ ಬಿಗ್ ಟ್ವಿಸ್ಟ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget