ಕರಾವಳಿ

ಕಾರಿಂಜ ದೇವಸ್ಥಾನದ ಬಳಿ ಮುಸ್ಲಿಂ ಯುವಕರ ಜತೆ ಹಿಂದೂ ಯುವತಿಯರು: ಹಿಂ.ಜಾ.ವೇ ಕಾರ್ಯಕರ್ತರಿಂದ ದಾಳಿ

ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಮುಸ್ಲಿಂ ಯುವಕರೊಂದಿಗೆ ತಿರುಗಾಡಿದ ಹಿಂದೂ ಯುವತಿಯರನ್ನು ಹಿಡಿದು ಹಿಂದೂ ಜಾಗರಣಾ ವೇದಿಕೆಯವರು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ. ಯುವತಿಯರ ಜತೆ ಅನ್ಯ ಕೋಮಿನ ಯುವಕರು ಇರುವುದು ತಿಳಿಯುತ್ತಿದ್ದಂತೆ ಕಾರ್ಯ ಪ್ರವೃತ್ತರಾದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ಜೋಡಿಗಳನ್ನು ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದರು. ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆದು ಕೊಂಡು ಹೋಗಿ ತನಿಖೆ ನಡೆಸಿದ್ದಾರೆ. ಲವ್ ಜಿಹಾದಿನ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ. ಈ ವೇಳೆ ಯುವತಿಯರ ಪೋಷಕರನ್ನು ಸ್ಥಳಕ್ಕೆ ಕರೆಯಿಸಬೇಕು. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Related posts

ಮೊಳಗಿದ ‘ಅಮರ ಸುಳ್ಯದ ಸಂಗ್ರಾಮ’ದ ಕಹಳೆ, 1837ರ ಇತಿಹಾಸದ ಸುತ್ತಲಿನ ಬೆಳಕು ಚೆಲ್ಲುವ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

ಪುತ್ತೂರು: ತಡರಾತ್ರಿ ಕಲ್ಲೇಗ ಟೈಗರ್ಸ್ ಹುಲಿ ಕುಣಿತ ತಂಡದ ನಾಯಕನ ಕೊಚ್ಚಿ ಕೊಲೆ..! ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ಬಹುಕೋಟಿ ಆಸ್ತಿ ಕಬಳಿಕೆ..? 21.5 ಎಕರೆ ದೇಗುಲದ ಭೂಮಿ ಮಾರಾಟಕ್ಕೆ ಕಸರತ್ತು..!