ಬೆಂಗಳೂರುರಾಜಕೀಯ

ಮತಾಂತರ ನಿ‍ಷೇಧ ಕಾಯ್ದೆ ರದ್ದು;ಸಾರ್ವಕರ್, ಹೆಡ್ಗೇವಾರ್ ಪಾಠಕ್ಕೂ ಕೊಕ್

183

ನ್ಯೂಸ್ ನಾಟೌಟ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು,ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಂಡಿದ್ದು, ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್‌.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಅಲ್ಲದೆ, ಹಿಂದಿನ ಸರ್ಕಾರ ಮಾಡಿದ್ದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ರದ್ದು ಮಾಡಿ, ಈ ಹಿಂದೆ ಪಠ್ಯವನ್ನು ಮುಂದುವರಿಸಲು ಸಂಪುಟ ತೀರ್ಮಾನಿಸಿದೆ ಎಂದು ತಿಳಿಸಿದರು.

See also  ಶಾಸಕ ಸತೀಶ್ ಸೈಲ್‌ ಗೆ ಹೈಕೋರ್ಟ್ ನಿಂದ ಜಾಮೀನು..! ಬೇಲೆಕೆರೆ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ
  Ad Widget   Ad Widget   Ad Widget   Ad Widget   Ad Widget   Ad Widget   Ad Widget