ರಾಜಕೀಯ

LIVE: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸುವುದಕ್ಕೂ ಮುನ್ನ ತಮ್ಮ ರಾಜಕೀಯ ಗುರು ಬಿ ಎಸ್ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿ ವೇದಿಕೆಯೇರಿದ ಬಸವರಾಜ್ ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿಕೊಂಡರು.

ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕೊಠಡಿಯ ನಾಮಫಲಕ ಬದಲಾಗಿದೆ. ನಿನ್ನೆಯವರೆಗೆ ಬಿ ಎಸ್ ಯಡಿಯೂರಪ್ಪನವರ ಹೆಸರು ಇದ್ದರೆ ಇಂದು ಬಸವರಾಜ ಬೊಮ್ಮಾಯಿ ಸಿಎಂ ಎಂದು ನಾಮಫಲಕ ಅಲಂಕೃತಗೊಂಡಿದೆ. 

Related posts

ಕರುನಾಡ ಮೊದಲ ಮುಸ್ಲಿಂ ಸ್ಪೀಕರ್ ಯು.ಟಿ.ಖಾದರ್ ಗೆ ಕರಾವಳಿ ಕಾಂಗ್ರೆಸ್ ಮುಖಂಡರ ಅಭಿನಂದನೆ!

ಸೌಜನ್ಯ ಮನೆಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ, ಸೌಜನ್ಯ ತಾಯಿಗೆ ಧೈರ್ಯ ತುಂಬಿದ ಹಿಂದೂ ನಾಯಕ

ಸಿಎಂಗೆ ಧಿಕ್ಕಾರ ಕೂಗಿದವರಿಗೆ 1 ಲಕ್ಷ ರೂ. ಬಹುಮಾನ..! ಏನಿದು ಮಾಜಿ ಶಾಸಕ ಬಿಡುಗಡೆ ಮಾಡಿದ ಆಡಿಯೋ..?