ಕರಾವಳಿಕೊಡಗುವೈರಲ್ ನ್ಯೂಸ್

ಮಡಿಕೇರಿ:ಗರ್ಭಿಣಿ ಕಾಡಾನೆಯನ್ನು ಗುಂಡಿಕ್ಕಿ ಹತ್ಯೆ,ಆರೋಪಿಗಳಿಗಾಗಿ ಮುಂದುವರಿದ ಶೋಧ

210

ನ್ಯೂಸ್ ನಾಟೌಟ್ : ಮಡಿಕೇರಿಯಲ್ಲಿ ಗರ್ಭ ಧರಿಸಿದ್ದ ಕಾಡಾನೆಯೊಂದನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ದುರಂತ ಸಂಭವಿಸಿದ್ದು,ಮಡಿಕೇರಿ ತಾಲೂಕಿನ ಕುಶಾಲನಗರ ತಾಲೂಕು ಗುಡ್ಡೆಹೊಸೂರು ಗ್ರಾಮದ ಬಾಳುಗೋಡು ಎಂಬಲ್ಲಿ.ಶನಿವಾರ ರಾತ್ರಿ ವೇಳೆಗೆ ದುಷ್ಕರ್ಮಿಗಳು ಗುಮಡಿಕ್ಕಿ ಹತ್ಯೆ ಮಾಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ.

18ರಿಂದ 20 ವರ್ಷದ ಹೆಣ್ಣಾನೆ ಸ್ಥಳದಲ್ಲೇ ಮೃತಪಟ್ಟಿದ್ದು, ಎರಡು ಗುಂಡು ತಗುಲಿದೆ ಎನ್ನುವ ಮಾಹಿತಿಯಿದೆ. ರವಿವಾರ ಬೆಳಗ್ಗೆ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದ ಸಂದರ್ಭ ಕಾಡಾನೆ ಮೃತಪಟ್ಟ ಸ್ಥಳದಿಂದ ಅನತಿ ದೂರದಲ್ಲಿ ಖಾಲಿ ತೋಟಾಗಳು ಪತ್ತೆಯಾಗಿವೆ. ಆರೋಪಿಗಳಿಗೆ ಶೋಧ ಮುಂದುವರಿಸಲಾಗಿದೆ.ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಶಿವರಾಮ್‌ ಬಾಬು, ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಮ, ಉಪವಲಯ ಅರಣ್ಯಾಧಿಕಾರಿಗಳ ಅನಿಲ್‌ ಡಿ’ಸೋಜಾ, ದೇವಯ್ಯ, ರಂಜನ್‌ ಹಾಗೂ ಆರ್‌ಆರ್‌ಟಿ ಸಿಬಂದಿ ಭೇಟಿ ನೀಡಿದರು.

See also  ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ, ಪ್ರಮುಖ ಆರೋಪಿ ಬಂಧನ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget