Latestರಾಜ್ಯವೈರಲ್ ನ್ಯೂಸ್

ಮಾರ್ಚ್ 22ಕ್ಕೆ ಕರ್ನಾಟಕ ಬಂದ್ ಎಂದ ವಾಟಾಳ್ ನಾಗರಾಜ್..! ಹಲವು ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗಿ..!

662

ನ್ಯೂಸ್ ನಾಟೌಟ್: ಬೆಳಗಾವಿಯಲ್ಲಿ ಕರ್ನಾಟಕದ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

ಇತ್ತೀಚೆಗೆ ಬೆಳಗಾವಿಯಲ್ಲಿ ಕರ್ನಾಟಕದ ಸಾರಿಗೆ ಇಲಾಖೆ KSRTC ಬಸ್‌ ನಲ್ಲಿ ಕಂಡಕ್ಟರ್‌ ಮತ್ತು ಪ್ರಯಾಣಿಕನೊಂದಿಗೆ ನಡೆದಿದ್ದ ಗಲಾಟೆ ಪ್ರಕರಣ ತಾರಕಕ್ಕೇರಿತ್ತು. ಅಂದು ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಅಲ್ಲದೆ ಕರ್ನಾಟಕದ ಬಸ್ ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು.

ಇದೀಗ ಇಂತಹ ಪುಂಡಾಟಿಕೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಿಗರ ವಿರುದ್ಧ ದೌರ್ಜನ್ಯ ಎಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಸರ್ಕಾರದ ಮೇಲೆ ಒತ್ತಡ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

ಇದನ್ನೂ ಓದಿಮದುವೆಗೆ ಒತ್ತಾಯಿಸಿ ವಿದ್ಯುತ್ ಕಂಬ ಏರಿದವ ತಾಯಿಯ ಎದುರೆ ಸುಟ್ಟು ಕರಕಲು..! ಪ್ರಕರಣ ದಾಖಲು..!

ಮಾರ್ಚ್‌ 22ರಂದು ಅಖಂಡ ಕರ್ನಾಟಕ ಬಂದ್ ಘೋಷಣೆ ಮಾಡಲಾಗಿದ್ದು, ಈ ಕುರಿತು ಇಂದು(ಮಾ.18) ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇಂದು ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ಮಾಡಲು ವಾಟಾಳ್ ನಾಗರಾಜ್ ಸಭೆ ಕರೆದಿದ್ದರು. ಈ ವೇಳೆ ಹಲವು ಸಂಘಟನೆಗಳ ಮುಖಂಡರು ಸಭೆಯಲ್ಲಿ ಹಾಜರಿದ್ದರು. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, “ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ, ಬಂದ್ ಮಾಡಿಯೇ ಮಾಡುತ್ತೇವೆ,” ಎಂದು ಘೋಷಣೆ ಮಾಡಿದ್ದಾರೆ.
‘ಹೊರರಾಜ್ಯ, ಸಂಸತ್ ಗಮನ ಸೆಳೆಯಲು ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ:ಕೇವಲ ಒಂದು ವರ್ಷಕ್ಕೆ 120 ಕೋಟಿ ರೂ. ತೆರಿಗೆ ಪಾವತಿಸಿದ ಅಮಿತಾಭ್ ಬಚ್ಚನ್..! 82ನೇ ವರ್ಷ ವಯಸ್ಸಿನಲ್ಲೂ ನಟನ ವಾರ್ಷಿಕ ಆದಾಯ ಕಂಡು ಅಧಿಕಾರಿಗಳಿಗೆ ಶಾಕ್..!

See also  ಕೆಎಸ್.ಆರ್.ಟಿ.ಸಿ ಆರಂಭಿಸಲಿದೆಯಾ ಸರಕು ಸಾಗಣೆ ಸೇವೆ..? ಲಾರಿಗಳನ್ನು ವಿನ್ಯಾಸಗೊಳಿಸಲಾದ ಕೆಎಸ್.ಆರ್.ಟಿ.ಸಿ ಯ ಪ್ಲಾನ್ ಏನು?
  Ad Widget   Ad Widget     Ad Widget   Ad Widget   Ad Widget   Ad Widget