ವೈರಲ್ ನ್ಯೂಸ್

“ಕಾವೇರಿ ವಿಚಾರದಲ್ಲಿ ಮೋದಿ ಜೊತೆಗೆ ನಾನು ಮಾತನಾಡಲ್ಲ” ಮಾಜಿ ಪ್ರಧಾನಿ ಹೀಗೆ ಹೇಳುವುದರ ಹಿಂದಿದೆ ಆ ಒಂದು ಕಾರಣ..!

ನ್ಯೂಸ್ ನಾಟೌಟ್: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನಾನು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರನ್ನು ಯಾವುದೇ ಕಾರಣಕ್ಕೂ ಭೇಟಿ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ (Former Prime Minister HD Deve Gowda) ತಿಳಿಸಿದ್ದಾರೆ.
ಮಾಜಿ ಪ್ರಧಾನಿಗಳ ಬಾಯಿಯಿಂದ ಇಂತಹ ಮಾತು ಕೇಳಿ ಎಲ್ಲರಿಗೂ ಅಚ್ಚರಿಯಾಗಿದೆ. ಅಷ್ಟಕ್ಕೂ ದೊಡ್ಡಗೌಡರು ಹೀಗೆ ಯಾಕೆ ಹೇಳಿದ್ರು ಅನ್ನುವುದಕ್ಕೆ ಕಾರಣವನ್ನೂ ನೀಡಿದ್ದಾರೆ. ಅವರು ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದ್ದು ಹೀಗೆ, ‘

ಪ್ರಧಾನಿಗಳ ಜೊತೆ ಈ ವಿಚಾರವನ್ನು ಚರ್ಚೆ ಮಾಡಲು ನಾನು ಹೋದರೆ ಅದಕ್ಕೆ ಬೇರೆ ರೀತಿಯಾದ ರಾಜಕೀಯ ಬಣ್ಣ ಕಟ್ಟುತ್ತಾರೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ಅವರನ್ನು ಭೇಟಿಯಾದರೆ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS alliance), ಸೀಟು ಹಂಚಿಕೆ ಬಗ್ಗೆ ಚರ್ಚೆ ಎಂದೆಲ್ಲ ಸುದ್ದಿ ಹಬ್ಬುತ್ತದೆ. ಅದಕ್ಕಾಗಿ ನಾನು ಮೋದಿ ಅವರನ್ನು ಭೇಟಿ ಮಾಡಲಾರೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಆಗುವ ಅನ್ಯಾಯಕ್ಕೆ ಮೊದಲು ಧರಣಿ ಮಾಡಿದ್ದೆ. ಧರಣಿ ಕುಳಿತು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಇವತ್ತು ಸದನದಲ್ಲಿ ಕಾವೇರಿ ವಿಚಾರವನ್ನು ಪ್ರಸ್ತಾಪಿಸಿದ್ದೇನೆ. ಕರ್ನಾಟಕ, ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್ ಗೆ ಕಳುಹಿಸಬೇಕು. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಬೇಕು. ಇದಕ್ಕೆ ನಾವು ಒಪ್ಪಿಕೊಳ್ಳುತ್ತೇವೆ, ಆದರೆ ತಮಿಳುನಾಡಿನವರು ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟ್ಟು ಇದೆ. ನಮ್ಮ ರಾಜಕಾರಣಿಗಳಲ್ಲಿ ಒಗ್ಗಟ್ಟು ಇಲ್ಲ. ತಮಿಳುನಾಡು ಈ ವಿಚಾರದಲ್ಲಿ ಒಗ್ಗಟ್ಟಾಗಿ ಇದೆ. ಆದರೆ ನಮ್ಮ ರಾಜ್ಯದಲ್ಲಿ ಹಾಗೆ ಇಲ್ಲ. ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಎಚ್.ಡಿ. ದೇವೇಗೌಡ ಹೇಳಿದರು.

5 ಸಾವಿರ ಕ್ಯೂಸೆಕ್ ನೀರು ಹರಿಸುವ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ – Cauvery Water Management Authority – CWMA) ಆದೇಶ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಇವತ್ತಿನ ಸಿಡಬ್ಲ್ಯೂಎಂಎ ಆದೇಶವು ನಮ್ಮ ರಾಜ್ಯಕ್ಕೆ ಬಿದ್ದ ಮಹತ್ತರವಾದ ಪೆಟ್ಟು. ಬೆಂಗಳೂರಿಗೆ ಕುಡಿಯುವ ನೀರು (Drinking water for Bengaluru) ಬೇಕು. ಮುಂದೇನು ಆಗುತ್ತದೆ ಎಂಬುದು ಗೊತ್ತಿಲ್ಲ. ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಣಯ ದುರಂತ.‌ ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರೋ ಗೊತ್ತಿಲ್ಲ. ನಾವು ಎಲ್ಲೋ ಒಂದು ಕಡೆ ಎಡವಿದ್ದೇವೆ ಎಂದು ಹೇಳಿದರು.

ಬಿಜೆಪಿ – ಜೆಡಿಎಸ್ ಮೈತ್ರಿ ಮೈತ್ರಿ ವಿಚಾರದ ಬಗ್ಗೆ ಮಾತನಾಡಿದ ಎಚ್.ಡಿ. ದೇವೇಗೌಡ ಅವರು, ನಾನು ಯಾವತ್ತೂ ಪ್ರತ್ಯೇಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದಿಲ್ಲ. ನಮ್ಮನ್ನು ಇಂಡಿಯಾ ಸಭೆಗೆ ಕರೆಯುವುದೇ ಬೇಡ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಹಾರ ಸಿಎಂ ನಿತೀಶ್ ಕುಮಾರ್‌ಗೆ ಹೇಳಿದ್ದಾರೆ. ಇನ್ನು ಬಿಜೆಪಿ ಮೈತ್ರಿ ವಿಚಾರವಾಗಿ ನಾನು ಯಾರನ್ನೂ ಭೇಟಿಯಾಗಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ. ಈಗ ಎಲ್ಲಿದ್ದೇವೆಯೋ ಅಲ್ಲಿಯೇ ಇರುತ್ತೇವೆ. ಈಗ ಮೈತ್ರಿ ಬಗ್ಗೆ ಯಾವುದೇ ಚರ್ಚೆ ಇಲ್ಲ. ಕುಮಾರಸ್ವಾಮಿ ಬರುವ ವಿಚಾರ ಸಹ ನನಗೆ ಗೊತ್ತಿಲ್ಲ. ಯಾವ ಮೈತ್ರಿ ಬಗ್ಗೆಯೂ ಸಹ ನಾನು ಚರ್ಚೆ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

Related posts

HDK: ನನ್ನ ಸುತ್ತ ಇರುವ 45 ಜನರ ಮೊಬೈಲ್‌ ಫೋನ್‌ಗಳನ್ನೂ ಕದ್ದಾಲಿಸಲಾಗುತ್ತಿದೆ ಎಂದ ಹೆಚ್.ಡಿ.ಕೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮುಹೂರ್ತದಲ್ಲೇ ಹೆರಿಗೆ ಮಾಡಿಸಿಕೊಂಡ ಮಹಿಳೆ..! ವೈದ್ಯರು ನೀಡಿದ್ದ ದಿನಾಂಕಕ್ಕೂ ಮೊದಲೇ ಹೆರಿಗೆ!

ಸೋನಿಯಾ ಗಾಂಧಿಗೆ ಬರ್ತ್ ಡೇ ವಿಶ್ ಮಾಡಿದ ಮೋದಿ, ಪ್ರಧಾನಿ ಮಾಡಿದ ‘ಟ್ವೀಟ್ ಎಕ್ಸ್’ ನಲ್ಲಿ ಮತ್ತೇನಿದೆ..?