ಕ್ರೈಂರಾಜಕೀಯವೈರಲ್ ನ್ಯೂಸ್

ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್‌..! ಚುನಾವಣೆ ಮುಗಿಯುವವರೆಗೂ ದಿಲ್ಲಿ ಸಿಎಂ ಬಂಧನದಲ್ಲಿರ್ತಾರಾ..?

174

ನ್ಯೂಸ್ ನಾಟೌಟ್ : ದಿಲ್ಲಿಯ ರೌಸ್‌ ಅವೆನ್ಯೂ ನ್ಯಾಯಾಲಯವು ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಅವಧಿಯನ್ನು ಎಪ್ರಿಲ್‌ 23ರ ತನಕ ಇಂದು ವಿಸ್ತರಿಸಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಮಾರ್ಚ್‌ 21ರಂದು ಬಂಧಿಸಲಾಗಿತ್ತು.

ಕೇಜ್ರಿವಾಲ್‌ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಮುಂದೆ ವರ್ಚುವಲ್‌ ಆಗಿ ಹಾಜರುಪಡಿಸಲಾಯಿತು. ಇನ್ನೊಂದೆಡೆ ತಮ್ಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌ ಇಡಿಗೆ ನೋಟಿಸ್‌ ಜಾರಿಗೊಳಿಸಿದೆ ಎಮದು ವರದಿ ತಿಳಿಸಿದೆ. ತನಿಖೆ ಎ,೨೩ಕ್ಕೆ ಪೂರ್ಣಗೊಳ್ಳದಿದ್ದರೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸುವ ಸಾಧ್ಯತೆಗಳಿವೆ.

See also  ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ..! 10ನೇ ತರಗತಿ ವಿದ್ಯಾರ್ಥಿನಿ ಸಾವು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget