ನ್ಯೂಸ್ ನಾಟೌಟ್: ದೆಹಲಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡು 50 ದಿನಗಳು ಕಳೆದರೂ ಇನ್ನೂ ರೇಖಾ ಗುಪ್ತಾಗೆ ಅಧಿಕೃತ ನಿವಾಸವನ್ನು ಲೋಕೋಪಯೋಗಿ ಇಲಾಖೆ ನೀಡಿಲ್ಲ. ಇದರಿಂದಾಗಿ ಶಾಲಿಮಾರ್ ಬಾಗ್ ನಲ್ಲಿರುವ ತಮ್ಮ ನಿವಾಸದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ದೆಹಲಿ ಸಚಿವಾಲಯಕ್ಕೆ ಪ್ರತಿದಿನ ಪ್ರಯಾಣಿಸುತ್ತಿದ್ದಾರೆ.
ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಆಡಳಿತದ ಅವಧಿಯಲ್ಲಿ ನಿರ್ಮಿಸಲಾದ ಶೀಶ್ ಮಹಲ್ ಗೆ ತೆರಳುವುದಿಲ್ಲ ಎಂದು ಹೇಳಿದ್ದಾರೆ. ಅವರ ಈ ನಿರ್ಧಾರ ಅಧಿಕಾರಿಗಳನ್ನು ಪರದಾಡುವಂತೆ ಮಾಡಿದ್ದು, ಇನ್ನೂ ಈ ಸಮಸ್ಯೆ ಪರಿಹಾರ ಸಿಕ್ಕಿಲ್ಲ.
ಶಾಲಿಮಾರ್ ಬಾಗ್ ನ ಅವರ ಪ್ರಸ್ತುತ ನಿವಾಸದಲ್ಲಿ ಹಿರಿಯ ಅಧಿಕಾರಿಗಳು, ವಿಐಪಿಗಳು ಮತ್ತು ಸಾರ್ವಜನಿಕರನ್ನು ಒಳಗೊಂಡಂತೆ ಬರುವ ಸಂದರ್ಶಕರಿಂದ ಸ್ಥಳಾವಕಾಶದ ಕೊರತೆ ಉಂಟಾಗುತ್ತಿದೆ.
ಅದಕ್ಕಾಗಿ ಲಭ್ಯವಿರುವ ಸರ್ಕಾರಿ ಬಂಗಲೆಗಳ ಮೌಲ್ಯಮಾಪನಗಳಾಗಿದ್ದು, ಅವರ ವಸತಿ ಬಗ್ಗೆ ಅಂತಿಮ ನಿರ್ಧಾರ ಬಾಕಿ ಉಳಿದಿದೆ. ಅಲ್ಲದೇ ಕೇಂದ್ರ ಸರ್ಕಾರದ ನಿಧಿಯಿಂದ ಸರ್ಕಾರ ಒದಗಿಸಿರುವ ಬಂಗಲೆಯನ್ನು ಹುಡುಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಬ್ಯಾಂಕ್..! ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅರೆಸ್ಟ್..!