ಕಾಸರಗೋಡು

ಐದರ ಹರೆಯದ ಬಾಲಕಿಯ ಮೇಲೆ ಎಸಗಿದ ಪೈಶಾಚಿಕ ಕೃತ್ಯಕ್ಕೆ 110 ದಿನದಲ್ಲೇ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

151

ನ್ಯೂಸ್‌ ನಾಟೌಟ್‌: ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾದಲ್ಲಿ ಜುಲೈ ಜುಲೈ 28 ರಂದು ಐದರ ಹರೆಯದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿ ಕೊ*ಲೆ ಮಾಡಿದ ಪೈಶಾಚಿಕ ಕೃತ್ಯಕ್ಕೆ ನ್ಯಾಯಾಲಯ ತಕ್ಕ ಶಿಕ್ಷೆ ವಿಧಿಸಿದೆ. ಪ್ರಕರಣದ ತಪ್ಪಿತಸ್ಥನಾಗಿರುವ ಬಿಹಾರ ಮೂಲದ ಅಶ್ವಕ್ ಆಲಂ (28) ಎಂಬಾತನಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ವಿಶೇಷ ನ್ಯಾಯಾಲಯ ಮಂಗಳವಾರ (ನ. 14) ಮರಣದಂಡನೆ ವಿಧಿಸಿದೆ.  ಕಳೆದ ವಾರ ಕೊಚ್ಚಿಯ ಪೋಕ್ಸೊ ನ್ಯಾಯಾಲಯವು ಆರೋಪಿ ಅಶ್ವಕ್ ಆಲಂ (28) ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಕೊ*ಲೆ ಮತ್ತು ಅತ್ಯಾ*ಚಾರಕ್ಕೆ ಸಂಬಂಧಿಸಿದ IPC ಸೆಕ್ಷನ್ 302, 376A ಮತ್ತು 297 ಮತ್ತು POCSO ಕಾಯ್ದೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆತನನ್ನು ದೋಷಿ ಎಂದು ಘೋಷಿಸಿತ್ತು. ಘಟನೆ ನಡೆದು ಕೇವಲ 110 ದಿನಗಳ ನಂತರ ಪ್ರಕರಣದ ತೀರ್ಪು ಬಂದಿದೆ. 30 ದಿನಗಳಲ್ಲಿ ತನಿಖೆ ಪೂರ್ಣಗೊಂಡು ಮುಂದಿನ 60 ದಿನಗಳಲ್ಲಿ ವಿಚಾರಣೆ ಮಾಡಲಾಗಿತ್ತು.

ವಲಸೆ ಕಾರ್ಮಿಕ ಅಶ್ವಕ್ ಆಲಂಗೆ ವಿಶೇಷ POCSO (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶ ಕೆ.ಸೋಮನ್ ಅತೀ ಕಠಿಣ ಶಿಕ್ಷೆ  ನೀಡಿದ್ದಾರೆ. ದೇಶಾದ್ಯಂತ ಮಕ್ಕಳ ದಿನಾಚರಣೆಯಂದೇ ಆತನಿಗೆ ಶಿಕ್ಷೆ ಘೋಷಿಸಲಾಗಿದೆ. POCSO ಕಾಯ್ದೆಯ 11ನೇ ವಾರ್ಷಿಕೋತ್ಸವವೂ ಇದೇ ದಿನ. ನವೆಂಬರ್ 14 ರಂದು ಆಲಂಗೆ ಶಿಕ್ಷೆ ವಿಧಿಸಿದಾಗ ಸಂತ್ರಸ್ತೆಯ ಪೋಷಕರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣವು ಅಪರೂಪದಲ್ಲಿ ಅಪರೂಪ ವರ್ಗಕ್ಕೆ ಸೇರುತ್ತದೆ. ಆದ್ದರಿಂದ ಅಪರಾಧಿಗೆ ಮರಣದಂಡನೆ ವಿಧಿಸಬೇಕು ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಚಾರ್ಜ್ ಶೀಟ್‌ನಲ್ಲಿ ಎಲ್ಲಾ 16 ಅಪರಾಧಗಳಲ್ಲಿ ಆಲಂ ತಪ್ಪಿತಸ್ಥನೆಂದು ನ್ಯಾಯಾಲಯ ತೀರ್ಪು ನೀಡಿತ್ತು. 16ರಲ್ಲಿ ಐದು ಅಪರಾಧಗಳಿಗೆ ಮರಣದಂಡನೆ ಶಿಕ್ಷೆಯಾಗುತ್ತದೆ ಎಂದು ಪ್ರಾಸಿಕ್ಯೂಷನ್ ಈ ಹಿಂದೆ ಹೇಳಿತ್ತು. ಬಿಹಾರದ ವಲಸೆ ಕಾರ್ಮಿಕರ ಪುತ್ರಿಯಾಗಿದ್ದ ಬಾಲಕಿಯನ್ನು ಆಕೆಯ ಕುಟುಂಬದ ಬಾಡಿಗೆ ಮನೆಯಿಂದ ಅಪಹರಿಸಿದ್ದ ಆಲಂ ಆಕೆಯ ಮೇಲೆ ಅತ್ಯಾಚಾರವೆಸಗಿದ ನಂತರ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಗೋಣಿಚೀಲದಲ್ಲಿ ಬಾಲಕಿ ಶ*ವ ಪತ್ತೆಯಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಅಪರಾಧಿಯನ್ನು ಪತ್ತೆ ಹಚ್ಚಿದ್ದರು. ಆಲಂ ಈ ಹಿಂದೆಯೂ ಇತರ ಪೋಕ್ಸೊ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಕೇರಳ ಪೊಲೀಸರು ಹೇಳಿದ್ದಾರೆ. ಮಕ್ಕಳ ದಿನಾಚರಣೆಯಂದು (ನವೆಂಬರ್ 14) ಬಂದಿರುವ ತೀರ್ಪು ಮಕ್ಕಳ ಮೇಲೆ ದೌರ್ಜನ್ಯ ಎಸಗುವ ಎಲ್ಲರಿಗೂ ಎಚ್ಚರಿಕೆ ನೀಡಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಆ ಮಗುವಿನ ಮೇಲೆ ಪೈಶಾಚಿಕ ಕೃತ್ಯವೆಸಗಲಾಗಿದೆ. ದೂರು ನೀಡಿದ ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರ್ಕಾರವು ಬಾಲಕಿಯ ಕುಟುಂಬಕ್ಕೆ ಎಲ್ಲಾ ರಕ್ಷಣೆ ಮತ್ತು ನೆರವು ನೀಡುವುದಾಗಿ ತಿಳಿಸಿದೆ. ಈ ರೀತಿಯ ದೌರ್ಜನ್ಯವನ್ನು ನಾಗರಿಕ ಸಮಾಜ ಸಹಿಸುವುದಿಲ್ಲ. ಈ ರೀತಿಯ ಅಪರಾಧ ಎಸಗುವವರನ್ನು ಪ್ರತ್ಯೇಕಿಸಲು ಸಮಾಜ ಸಿದ್ಧವಾಗಬೇಕು ಎಂದು ಪಿಣರಾಯಿ ಹೇಳಿದ್ದಾರೆ.

See also  ಖಾಸಗಿ ಬಸ್ ಕಂಡಕ್ಟರ್ ನ ಸಮಯಪ್ರಜ್ಞೆಯಿಂದ ಬದುಕುಳಿದ ಪ್ರಯಾಣಿಕ..! ಬಿದ್ದವನನ್ನು ಒಂದೇ ಕೈಯಲ್ಲಿ ಹಿಡಿದು ರಕ್ಷಿಸಿ ಹೀರೋ ಆದ ಕಂಡಕ್ಟರ್..! ಇಲ್ಲಿದೆ ವೈರಲ್ ವೀಡಿಯೋ

  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget