ಕಾಸರಗೋಡುಕ್ರೈಂರಾಜಕೀಯವೈರಲ್ ನ್ಯೂಸ್

ಕೇರಳ ಸಿಎಂ ಪಿಣರಾಯಿ ವಿಜಯನ್‌ ಗೆ ಬೆದರಿಕೆ ಹಾಕಿದ್ಯಾರು? ಯಾರು ಈ 7ನೇ ತರಗತಿ ಬಾಲಕ?

ನ್ಯೂಸ್ ನಾಟೌಟ್ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಗೆ ಬೆದರಿಕೆ ಕರೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದವನು 7ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಎಂದು ತಿಳಿದುಬಂದಿದೆ.

ಪೊಲೀಸರು ಆತನ ಮನೆಗೆ ಭೇಟಿ ನೀಡಿ ಪಾಲಕರಿಂದ ವಿವರಣೆ ಪಡೆದಿದ್ದಾರೆ. ‘ತಮ್ಮ ಮಗನಿಗೆ ಏನೂ ತಿಳಿದಿಲ್ಲ. ಮೊಬೈಲ್‌ ಫೋನ್‌ ಬಳಸುತ್ತಿದ್ದಾಗ, ಆಕಸ್ಮಿಕವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಹೋಗಿದೆ’ ಎಂದು ಪೋಷಕರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

‘ಪಾಲಕರ ಹೇಳಿಕೆ ತೃಪ್ತಿದಾಯಕವಾಗಿಲ್ಲ. ಹೀಗಾಗಿ ತನಿಖೆಯನ್ನು ಎಲ್ಲಾ ಆಯಾಮಗಳಿಂದಲೂ ನಡೆಸಲಾಗುತ್ತಿದೆ. ಈ ಕುರಿತಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

Related posts

ಇಬ್ಬರು ಮಕ್ಕಳನ್ನು ಕೊಲೆಗೈದ ತಾಯಿ ರಾತ್ರೋರಾತ್ರಿ ಜೈಲಿನೊಳಗೆ ಆತ್ಮಹತ್ಯೆ..! ಆಕೆಯ ಪತಿಗೂ ಜೈಲುವಾಸ..!

ಪುತ್ತೂರು: ಹೆರಿಗೆ ವೇಳೆ ತೀವ್ರ ರಕ್ತಸ್ರಾವ, ಕರಾಯದ ಮಹಿಳೆ ದಾರುಣ ಸಾವು!

ಪೊಲೀಸರ ಎದುರೇ ಶಾಸಕನ ಕಪಾಳಕ್ಕೆ ಬಾರಿಸಿದ ವಕೀಲ..! ಇಲ್ಲಿದೆ ವೈರಲ್ ವಿಡಿಯೋ