ಕಾಸರಗೋಡುಕ್ರೈಂರಾಜಕೀಯವೈರಲ್ ನ್ಯೂಸ್

ಕೇರಳ ಸಿಎಂ ಪಿಣರಾಯಿ ವಿಜಯನ್‌ ಗೆ ಬೆದರಿಕೆ ಹಾಕಿದ್ಯಾರು? ಯಾರು ಈ 7ನೇ ತರಗತಿ ಬಾಲಕ?

231

ನ್ಯೂಸ್ ನಾಟೌಟ್ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಗೆ ಬೆದರಿಕೆ ಕರೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದವನು 7ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಎಂದು ತಿಳಿದುಬಂದಿದೆ.

ಪೊಲೀಸರು ಆತನ ಮನೆಗೆ ಭೇಟಿ ನೀಡಿ ಪಾಲಕರಿಂದ ವಿವರಣೆ ಪಡೆದಿದ್ದಾರೆ. ‘ತಮ್ಮ ಮಗನಿಗೆ ಏನೂ ತಿಳಿದಿಲ್ಲ. ಮೊಬೈಲ್‌ ಫೋನ್‌ ಬಳಸುತ್ತಿದ್ದಾಗ, ಆಕಸ್ಮಿಕವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಹೋಗಿದೆ’ ಎಂದು ಪೋಷಕರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

‘ಪಾಲಕರ ಹೇಳಿಕೆ ತೃಪ್ತಿದಾಯಕವಾಗಿಲ್ಲ. ಹೀಗಾಗಿ ತನಿಖೆಯನ್ನು ಎಲ್ಲಾ ಆಯಾಮಗಳಿಂದಲೂ ನಡೆಸಲಾಗುತ್ತಿದೆ. ಈ ಕುರಿತಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

See also  ಟಿವಿ ನಿರೂಪಕನನ್ನು ಅಪಹರಿಸಿದ್ದೇಕೆ ಆ ಮಹಿಳೆ..? ಇಲ್ಲಿದೆ ವಿಚಿತ್ರ ಲವ್ವಿ-ಡವ್ವಿ ಸ್ಟೋರಿ..!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget