ಶಿಕ್ಷಣಸುಳ್ಯ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ, ದೇಶಕ್ಕಾಗಿ ಪ್ರಾಣತೆತ್ತ ಹುತಾತ್ಮ ಯೋಧರಿಗೆ ಗೌರವ ನಮನ

140

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಕಾರ್ಗಿಲ್ ವಿಜಯ ದಿನವನ್ನು ಶುಕ್ರವಾರ (ಜು.26 ) ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಗಿಲ್ ವಿಜಯ್ ಆಪರೇಷನ್ ಕುರಿತು ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ.ಎಂ. ಮಾತನಾಡಿದರು. ಕಾಲೇಜಿನ ಗ್ರಂಥಪಾಲಕ ಉಮೇಶ್ ಕಾರ್ಗಿಲ್ ವಿಜಯ ದಿನದ ಶುಭಕೋರಿದರು. ಹುತಾತ್ಮ ಯೋಧರಿಗೆ ಗೌರವಾರ್ಪಣೆಯಾಗಿ ಮೌನಪ್ರಾರ್ಥನೆ ಸಲ್ಲಿಸಲಾಯಿತು. ಎನ್‌ಸಿಸಿ ವತಿಯಿಂದ ಎಲ್ಲಾ ಕೆಡೆಟ್‌ಗಳಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಮತ್ತು ಕೆಲವು ಹಣ್ಣಿನ ಗಿಡಗಳನ್ನು ಕಾಲೇಜು ಆವರಣದಲ್ಲಿ ನೆಡಲಾಯಿತು. ಎನ್‌ಸಿಸಿ ಅಧಿಕಾರಿ ಲೇ. ಸೀತಾರಾಮ ಎಂ.ಡಿ. ಕಾರ್ಯಕ್ರಮ ಆಯೋಜಿಸಿದರು.

See also  Chandrayaan3:ಚಂದ್ರಯಾನ-3 ರ ಕ್ಲೈಮ್ಯಾಕ್ಸ್ ಇಂದು!,ಸುಳ್ಯ ಕಲ್ಕುಡ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget