ಕೊಡಗು

ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಗುಂಡಿಟ್ಟು ಹತ್ಯೆ!

ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಭಾರತೀಯ ಕಾಡೆಮ್ಮೆಯನ್ನು ಕಿಡಿಗೇಡಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಬಗ್ಗೆ ವರದಿಯಾಗಿದೆ.ಮತ್ತಿಗೋಡು ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಹೊಟ್ಟೆಗೆ ಗಾಯ:

ತಿತಿಮತಿ-ಹುಣಸೂರು-ಮೈಸೂರು ರಾಜ್ಯ ಹೆದ್ದಾರಿ 90ರಲ್ಲಿ ಭಾರಿ ಗಾತ್ರದ ಕಾಡೆಮ್ಮೆಯ ಶವ ಬಿದ್ದಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಪಳಗಿದ ಆನೆಗಳ ಸಹಾಯದಿಂದ ಕಾಡೆಮ್ಮೆಯ ಮೃತದೇಹವನ್ನು ಸ್ಥಳಾಂತರಿಸಿದರು. ಕಾಡೆಮ್ಮೆಯ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದ್ದು, ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

೬ ವರ್ಷದ ಕಾಡೆಮ್ಮೆ:


ಇಲಾಖೆಯ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮರಣೋತ್ತರ ಪರೀಕ್ಷೆ ನಡೆಸಿದರು. ಸುಮಾರು 6 ವರ್ಷದ ಕಾಡೆಮ್ಮೆ ಇದಾಗಿದ್ದು, ದೇಹದಲ್ಲಿ ಎರಡು ಗುಂಡುಗಳು ಪತ್ತೆಯಾಗಿದೆ. ಎದೆ ಮತ್ತು ಕಾಲಿಗೆ ಗುಂಡುಗಳನ್ನು ಹಾರಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಕಾಡೆಮ್ಮೆಗೆ ಗುಂಡು ಹಾರಿಸಿದ ಕಿಡಿಗೇಡಿಗಳ ಪತ್ತೆಗೆ ಇದೀಗ ತನಿಖೆ ಆರಂಭಿಸಲಾಗಿದೆ ಎಂದು ನಾಗರಹೊಳೆ ವನ್ಯಜೀವಿ ವಿಭಾಗದ ಡಿಸಿಎಫ್ ಹರ್ಷ ತಿಳಿಸಿದ್ದಾರೆ.

Related posts

ಐಪಿಎಲ್ ಬೆಟ್ಟಿಂಗ್ ಭೂತಕ್ಕೆ ಓರ್ವ ಬಲಿ,ಹಣ ಕೇಳಲೆಂದು ಹೋದ ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ

ಮಡಿಕೇರಿ: ಕಾಣೆಯಾಗಿದ್ದ ಬಾಲಕನ ಮೃತದೇಹ ಪತ್ತೆ,ಕಡಲ ಕಿನಾರೆಯಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ

ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಕೊಡಗಿಗೆ ಬಂದಿದ್ದ ವ್ಯಕ್ತಿ ಸಾವು