ಕರಾವಳಿಕೊಡಗುಕ್ರೈಂ

ಮಡಿಕೇರಿ:ಭೀಕರ ಬೈಕ್ ಅಪಘಾತ,ಕಾಲೇಜ್ ವಿದ್ಯಾರ್ಥಿನಿ ದಾರುಣ ಅಂತ್ಯ

205

ನ್ಯೂಸ್ ನಾಟೌಟ್:ಅಪಘಾತವೊಂದರಲ್ಲಿ ಕಾಲೇಜ್(Collage) ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಡಗು(Kodagu) ಜಿಲ್ಲೆಯ ಕುಶಾಲನಗರ(Kushalnagar) ಪಟ್ಟಣದಿಂದ ವರದಿಯಾಗಿದೆ.ಪಟ್ಟಣದ ಇಂದಿರಾ ಬಡಾವಣೆ ನಿವಾಸಿ ಪೂಣಚ್ಚ ಎಂಬುವವರ ಪುತ್ರಿ ಭಾವನ (21) ಮೃತ ಯುವತಿ.

ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್​ ಸ್ಕೂಟಿಗೆ ಅಪ್ಪಳಿಸಿದೆ.ಈ ವೇಳೆ ಬೈಕ್ ಅಪಘಾತ (Accident) ಸಂಭವಿಸಿದೆ. ಜೊತೆಯಲ್ಲಿದ್ದ ಕೊಪ್ಪದ ಬಳಿಯ ಮರೂರು ನಿವಾಸಿ, ವಿದ್ಯಾರ್ಥಿನಿ ನಿಸರ್ಗ ತೀವ್ರವಾಗಿ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾವನ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕುಶಾಲನಗರಕ್ಕೆ ಬಂದಿದ್ದ ಈಕೆ ಸ್ನೇಹಿತೆ ನಿಸರ್ಗಳೊಂದಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಮಡಿಕೇರಿ:ಸಾಜಿದ್ ಗೆ ಚಾಕುವಿನಿಂದ ಇರಿದ ಶ್ರೀನಿಧಿ..! ಚಿಕಿತ್ಸೆ ಫಲಿಸದೆ ಯುವಕ ಮೃತ್ಯು
  Ad Widget   Ad Widget   Ad Widget   Ad Widget   Ad Widget   Ad Widget   Ad Widget