ಕೊಡಗು

ಕೊಡಗು: ಯುವತಿಯನ್ನು ಕಾಫಿ ತೋಟದೊಳಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ! ಸ್ಥಳೀಯರಿಂದ ಯುವತಿಯ ರಕ್ಷಣೆ!

213

ನ್ಯೂಸ್‌ ನಾಟೌಟ್‌:   ದುಷ್ಕರ್ಮಿಗಳ ತಂಡವೊಂದು ಯುವತಿಯೊಬ್ಬಳನ್ನು ಕಾಫಿ ತೋಟಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಗಳವಾರ ಮಾರ್ಚ್೨೧ ರಂದು ರಾತ್ರಿ ಮಡಿಕೇರಿಯಲ್ಲಿ ನಡೆದಿದೆ.

ಆದರೆ, ಯುವತಿ ಕಿರುಚಿಕೊಂಡ ಹಿನ್ನೆಲೆಯಲ್ಲಿ ಆರೋಪಿಗಳು ಆಕೆಯನ್ನು ಬಿಟ್ಟು ಓಡಿದ್ದಾರೆ. ಆಗ ಒಬ್ಬನನ್ನು ಸ್ಥಳೀಯರು ಹಿಡಿದಿದ್ದಾರೆ. ಇತರ ಇಬ್ಬರು ತಪ್ಪಿಸಿಕೊಂಡಿದ್ದು, ಸಿಕ್ಕಿದಾತ ನಂದಿ ಮೊಟ್ಟೆಯ ರಾಜ ಎಂಬ ಹೆಸರಿನ ವ್ಯಕ್ತಿ ಎಂದು ವರದಿ ತಿಳಿಸಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತಾಕೇರಿ ಸಮೀಪದ ಬಿಳಿಗೇರಿಯಲ್ಲಿ 19 ವರ್ಷ ವಯಸ್ಸಿನ ದಲಿತ ವಿವಾಹಿತ ಯುವತಿಯ ಮೇಲೆ ದೌರ್ಜನ್ಯ ನಡೆದಿದೆ. ರಾತ್ರಿ 9.30ರ ಹೊತ್ತಿಗೆ ಆಕೆ ನಡೆದುಕೊಂಡು ಹೋಗುತ್ತಿದ್ದಾಗ ಮೂವರು ದುಷ್ಟರು ಆಕೆಯನ್ನು ಬಲಾತ್ಕಾರವಾಗಿ ಕಾಫಿ ತೋಟದೊಳಗೆ ಎಳೆದೊಯ್ಯಲು ಪ್ರಯತ್ನಿಸಿದರು ಎನ್ನಲಾಗಿದೆ.

ತಕ್ಷಣ ಯುವತಿ ಜೋರಾಗಿ ಕಿರುಚಿಕೊಂಡಾಗ ಯುವತಿಯ ಸಂಬಂಧಿಕರು ಅದನ್ನು ಗಮನಿಸಿ ಅಲ್ಲಿಗೆ ದಾವಿಸಿದ್ದಾರೆ, ನಂತರ ಸ್ಥಳೀಯರು ಹಾಗೂ ಹಿಂದು ಜಾಗರಣ ವೇದಿಕೆಯ ಪ್ರಮುಖರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ತಕ್ಷಣ ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮೂವರಲ್ಲಿ ಓರ್ವ ಆರೋಪಿಯನ್ನು ದುಷ್ಕೃತ್ಯಕ್ಕೆ ಬಳಸಿದ ಎರಡು ಆಟೋಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಮುಖ ಆರೋಪಿಗಳಾದ ಹಟ್ಟಿಹೊಳೆಯ ನೌಶದ್ ಇಗ್ಗೋಡ್ಲು ಆಶ್ರಯ ಕಾಲೋನಿಯ ನಿವಾಸಿ ಹಾಗೂ ಮಾದಾಪುರದಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿರುವ ಫಾರೂಕ್ ಎಂದು ತಿಳಿದು ಬಂದಿದ್ದು, ಕತ್ತಲಲ್ಲಿ ಓಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸೋಮವಾರಪೇಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೊಪಿಗಳಿಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

See also  ಮಡಿಕೇರಿ: ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು
  Ad Widget   Ad Widget     Ad Widget   Ad Widget   Ad Widget   Ad Widget