ನ್ಯೂಸ್ ನಾಟೌಟ್ : ದಕ್ಷಿಣದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಬಂದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಟಿ.ಶೆಟ್ಟಿಗೇರಿಯ ಬೀರುಗದಲ್ಲಿ ನಡೆದಿದೆ. ಹೋಂಸ್ಟೇಯೊಂದರಲ್ಲಿ ಈ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರದ ನಿವಾಸಿ ಅಭಿಷೇಕ್ (31) ಮೃತ ವ್ಯಕ್ತಿಯಾಗಿದ್ದಾರೆ. ಹೃದಯಾಘಾತ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಮೃತರ ಸಹೋದರ ಅಶೋಕ್ ಕುಮಾರ್ ಅವರು ನೀಡಿರುವ ದೂರಿನ ಹಿನ್ನೆಲೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದ ಅಭಿಷೇಕ್ ಸಹಿತ 17 ಮಂದಿ ಸ್ನೇಹಿತರು ಪ್ರವಾಸಕ್ಕೆಂದು ಕೊಡಗಿಗೆ ಬಂದಿದ್ದರು.