ಕೊಡಗು

ಮಡಿಕೇರಿ: ರೆಸಾರ್ಟ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೂವರ ಮೃತದೇಹ ಪತ್ತೆ,ದಂಪತಿ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

141

ನ್ಯೂಸ್ ನಾಟೌಟ್ :ರೆಸಾರ್ಟ್ ವೊಂದರಲ್ಲಿ ಮಗು ಸೇರಿ ಮೂವರ ಮೃತದೇಹ ಪತ್ತೆಯಾಗಿರುವ ಘಟನೆ ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದಿಂದ ವರದಿಯಾಗಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮಗುವಿನ ಮೃತದೇಹ ಹಾಸಿಗೆಯಲ್ಲಿ ಪತ್ತೆಯಾಗಿದೆ.

ಪತಿ, ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.ಕೇರಳ ರಾಜ್ಯದ ಕೊಟ್ಟಾಯಂ ಬಳಿಯ ಪಡಿಚಾಟು ಗ್ರಾಮದ ವಿನೋದ್ (37) ಹಾಗೂ ಅವರ ಪತ್ನಿ, ಮಗು ಮೃತಪಟ್ಟಿದ್ದಾರೆ. ಮೊದಲು ಮಗುವಿನ ಪ್ರಾಣವನ್ನು ತೆಗೆದು ದಂಪತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಶುಕ್ರವಾರ ಸಂಜೆ ವೇಳೆಗೆ ಪ್ರವಾಸಕ್ಕೆಂದು ಕೊಡಗಿಗೆ ಬಂದವರು ರೆಸಾರ್ಟ್ ನಲ್ಲಿ ತಂಗಿದ್ದರು ಎಂದು ಹೇಳಲಾಗಿದೆ.ಕೇರಳದಿಂದ ಕುಟುಂಬದ ಸದಸ್ಯರು ಬಂದ ನಂತರವಷ್ಟೇ ಹೆಚ್ಚಿನ ಮಾಹಿತಿ ತಿಳಿಯಲಿದೆ. ಸ್ಥಳಕ್ಕೆ ಮಡಿಕೇರಿ ಗಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಮನೆ ಬಾಗಿಲಿಗೆ ಕಾವೇರಿ ತೀರ್ಥ ಮಾರಾಟಕ್ಕೆ ಭಾರಿ ವಿರೋಧ:ಈ ವ್ಯವಸ್ಥೆಯನ್ನು ರದ್ದುಪಡಿಸಿ ಇಲ್ಲದಿದ್ದರೆ ಪ್ರತಿಭಟನೆಯ ಎಚ್ಚರಿಕೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget