Latestಕೊಡಗು

ಮಡಿಕೇರಿ: ತೋಟವೊಂದರಲ್ಲಿ ನವಜಾತ ಶಿಶುವಿನ ಕಳೇಬರ ಪತ್ತೆ , ಶಿಶುವನ್ನು ಎಸೆದು ಹೋದವರಿಗಾಗಿ ತೀವ್ರ ಶೋಧ

340

ನ್ಯೂಸ್ ನಾಟೌಟ್: ನವಜಾತ ಶಿಶುವಿನ ಕಳೇಬರ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಬಗ್ಗೆ ವರದಿಯಾಗಿದೆ. ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯ ಭವನ ಬಳಿಯ ತೋಟದಲ್ಲಿ ಮಗುವಿನ ಕಳೇಬರ ಪತ್ತೆಯಾಗಿದೆ.ಜನಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿದ್ದು, ನಾಯಿಗಳು ಎಳೆದಾಡುತ್ತಿದ್ದ ದೃಶ್ಯ ಸಾರ್ವಜನಿಕರ ಗಮನಕ್ಕೆ ಕಂಡು ಬಂದಿದೆ.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಅವರು ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ತಾಲೂಕು ವೈದ್ಯಾಧಿಕಾರಿ ಇಂದೂಧರ್, ಕುಶಾಲನಗರ ವೃತ ನಿರೀಕ್ಷಕ ದಿನೇಶ್ ಕುಮಾರ್, ಗ್ರಾಮಾಂತರ ಠಾಣಾಧಿಕಾರಿ ಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ನಡೆಸಿದರು. ನಂತರ ಕಳೇಬರವನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೂಕ್ತ ತನಿಖೆ ನಡೆಸಿ ಶಿಶುವನ್ನು ಬಿಸಾಡಿ ಹೋದವರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆರ್.ಕೆ.ಚಂದ್ರ ಒತ್ತಾಯಿಸಿದ್ದಾರೆ.

See also  ಮೊಬೈಲ್‌ ನಲ್ಲಿ ಮಾತನಾಡುತ್ತಾ ಮಗುವನ್ನು ಪಾರ್ಕ್‌ನಲ್ಲಿಯೇ ಬಿಟ್ಟು ಹೋದ ತಾಯಿ..! ವಿಡಿಯೋ ವೈರಲ್
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget