ನ್ಯೂಸ್ ನಾಟೌಟ್:ಕೊಡಗಿನಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.ಸಿದ್ದಾಪುರ-ಪಾಲಿಬೆಟ್ಟ ರಸ್ತೆಯ ತೂಪನಕೊಲ್ಲಿ ಎಂಬಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಆತಂಕವನ್ನೇ ಸೃಷ್ಟಿಸಿದೆ.ನಡು ರಸ್ತೆಯಲ್ಲೇ ಕಾಡಾನೆಗಳು ಹಿಂಡು ಹಿಂಡಾಗಿ ಬರುತ್ತಿರೋದನ್ನು ಕಂಡು ವಾಹನ ಚಾಲಕರು ಬೆಚ್ಚಿ ಬಿದ್ದಿದ್ದಾರೆ.ಮಾತ್ರವಲ್ಲ ಮಾರ್ಗವನ್ನೇ ಬದಲಿಸಿದ್ದು ಕೆಲವೇ ನಿಮಿಷಗಳಲ್ಲಿ ತಲುಪುವ ಸ್ಥಳಕ್ಕೆ ಸುತ್ತು ಬಳಸಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ಕಪಕ್ಕದ ತೋಟ , ಕಾಡು ಇದ್ದರೂ ಕೂಡ ಗಜಪಡೆ ರಸ್ತೆಯ ಮೂಲಕವೇ ಸಂಚರಿಸಿ ಕೆಲ ಕಾಲ ಭಯದ ವಾತಾವರಣವೇ ನಿರ್ಮಾಣವಾಗಿತ್ತು. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಸುತ್ತಮುತ್ತಲಿನ ತೋಟಗಳಲ್ಲಿದ್ದ 2-3 ವರ್ಷದ ಅಡಿಕೆ ಗಿಡಗಳನ್ನು ಸಂಪೂರ್ಣ ನಾಶ ಮಾಡಿದೆ. ಯಾವುದೇ ಕೃಷಿ ಫಸಲು ಕೈಗೆ ಸಿಗುತ್ತಿಲ್ಲ, ಬದಲಿಗೆ ಕಾಡಾನೆಗಳ ಪಾಲಾಗುತ್ತಿದೆ. ಕಾರ್ಮಿಕರು ತೋಟದಲ್ಲಿ ಕೆಲಸ ಮಾಡಲು ಹಿಂಜರಿಯುತ್ತಿದ್ದಾರೆ ಎಂದು ಸ್ಥಳೀಯ ಕೃಷಿಕರು ಬೇಸರ ವ್ಯಕ್ತಪಡಿಸಿದ್ದಾರೆ.ಅರಣ್ಯ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಂಡು ಕಾಡಾನೆಗಳನ್ನು ಕಾಡಿಗಟ್ಟಬೇಕು ಮತ್ತು ಬೆಳೆನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
View this post on Instagram