Latestಕೊಡಗುಕ್ರೈಂವೈರಲ್ ನ್ಯೂಸ್

ಕೊಡಗು: ಹುಲಿ ಉಗುರು ಮತ್ತು ಚರ್ಮ ಮಾರಾಟದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ..! 12 ಹುಲಿ ಉಗುರು ವಶಕ್ಕೆ..!

617
Pc Cr: Vartha bharati

ನ್ಯೂಸ್ ನಾಟೌಟ್: ಹುಲಿ ಉಗುರು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಇಂದು(ಫೆ.19) ಯಶಸ್ವಿಯಾಗಿದೆ. ಸುಮಾರು 12 ಹುಲಿ ಉಗುರುಗಳ ಮಾರಾಟಕ್ಕೆ ವ್ಯವಹಾರ ಕುದುರಿಸುತ್ತಿರುವಾಗಲೇ ದಾಳಿ ನಡೆಸಿದ ಅಧಿಕಾರಿಗಳು ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ದಾಳಿ ಸಂದರ್ಭ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬಿ-ಶೆಟ್ಟಿಗೇರಿಯ ಪಿ.ಎನ್.ರಾಜಪ್ಪ ಹಾಗೂ ಬೆಂಗಳೂರು ನಗರದ ಬನಶಂಕರಿಯ ಗೀತಾ ಎಂಬುವವರೇ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 12 ಹುಲಿ ಉಗುರು ಮತ್ತು ಕೃತ್ಯಕ್ಕೆ ಬಳಸಿದ್ದ ಮಾರುತಿ ವ್ಯಾನ್ ಅನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ಬೀರುಗ ಗ್ರಾಮದ ಸಂಜು ಎಂಬಾತ ಪರಾರಿಯಾಗಿದ್ದಾನೆ.

ಪೊನ್ನಂಪೇಟೆಯ ಟಿ-ಶೆಟ್ಟಿಗೇರಿ-ಬೀರುಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಮಾರುತಿ ಓಮಿನಿ ಕಾರಿನ ಬಳಿ ಓರ್ವ ಮಹಿಳೆ ಸೇರಿದಂತೆ ಮೂವರು ವ್ಯವಹರಿಸುತ್ತಿರುವ ಕುರಿತು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗಕ್ಕೆ ಬಂದ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಲಾಯಿತು. ಈ ಸಂದರ್ಭ ಸಂಜು ತಲೆ ಮರೆಸಿಕೊಂಡಿದ್ದಾನೆ. ಕಾರಿನ ಬಳಿ ಇದ್ದ ಆರೋಪಿಗಳಾದ ರಾಜಪ್ಪ ಹಾಗೂ ಗೀತಾಳನ್ನು ವಿಚಾರಣೆಗೊಳಪಡಿಸಿದ ವೇಳೆ ಪರಾರಿಯಾದ ಸಂಜು ಹುಲಿಯ ಉಗುರು ಮತ್ತು ಚರ್ಮವನ್ನು ಮಾರಾಟ ಮಾಡಲು ಬಂದಿರುವುದಾಗಿ ತಿಳಿದು ಬಂದಿದೆ.

12 ಹುಲಿ ಉಗುರನ್ನು ನೀಡಿ ಚರ್ಮ ನೀಡುವಷ್ಟರಲ್ಲಿ ನಡೆದ ದಾಳಿಯಿಂದ ಭಯಗೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಸಂಜು ಮನೆ ಮೇಲೆ ದಾಳಿ ನಡೆಸಿದ ಸಂದರ್ಭ ಕೃತ್ಯಕ್ಕೆ ಬಳಸುತ್ತಿದ್ದ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಚಾರಣೆ ಮುಂದುವರಿದಿದೆ.

See also  ಮದುಮಗಳು ಹಣ, ಚಿನ್ನಾಭರಣದೊಂದಿಗೆ ರಾತ್ರೋರಾತ್ರಿ ಪರಾರಿ! ಸಿಸಿಟಿವಿಯಿಂದ ಬಯಲಾಯ್ತು ರಹಸ್ಯ! ಮದುಮಗ ಕೋರ್ಟ್ ಮುಂದೆ ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget