ಕ್ರೈಂ

ಬೆಳ್ತಂಗಡಿ-ಕೊಕ್ಕಡ: ಅಕ್ರಮ ಗೋಸಾಗಾಟ ವಾಹನ ತಡೆದು ಪೊಲೀಸರಿಗೊಪ್ಪಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

636

ಕೊಕ್ಕಡ: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಅಕ್ರಮ ಗೋಸಾಗಾಟ ತಡೆದು ವಾಹನ ಸಹಿತ ಪೋಲಿಸರಿಗೊಪ್ಪಿಸಿದ ಘಟನೆ ಇಂದು ಮುಂಜಾನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟುನಿಂದ ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ಗೆ ವಾಹನವೊಂದರಲ್ಲಿ ಎರಡು ಗೋವುಗಳ ಸಾಗಿಸುತ್ತಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ಲಭಿಸಿದ್ದು ಕೂಡಲೇ ಕಾರ್ಯ ಪ್ರವೃತ್ತರಾದ ಕೊಕ್ಕಡ ಜಾಗರಣ ವೇದಿಕೆಯ ಕಾರ್ಯಕರ್ತರು ತಿಪ್ಪೆಮಜಲು ಎಂಬಲ್ಲಿ ವಾಹನವನ್ನು ತಡೆದಿದ್ದಾರೆ. ನಂತರ ಧರ್ಮಸ್ಥಳ ಠಾಣೆಯ ಪೋಲಿಸರಿಗೆ ಸುದ್ದಿ ಮುಟ್ಟಿಸಿದ್ದು, ಎರಡು ಗಂಟೆಗಳ ಬಳಿಕ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ. ‌

ಸದ್ಯ ಎರಡು ಗೋವು ಸಹಿತ ವಾಹನವನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಆರೋಪಿಯನ್ನೂ ಕೂಡ ವಶಕ್ಕೆ ಪಡೆಯಲಾಗಿದೆ. ಈ ಭಾಗದಲ್ಲಿ ಅಕ್ರಮ ಗೋಸಾಗಾಟ ಪ್ರಕರಣಗಳು ನಡೆಯುತ್ತಲೇ ಇದ್ದು, ಪೋಲಿಸರು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.

See also  ಮಂಗಳೂರು: 90 ಲಕ್ಷ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ, ಮೂವರು ಅರೆಸ್ಟ್! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇರುವ ಏನಿದು ಸಮುದ್ರ ನಿಧಿ?
  Ad Widget   Ad Widget   Ad Widget   Ad Widget   Ad Widget