Latestರಾಜ್ಯ

ಕೊಲ್ಲೂರು ಶ್ರೀಮೂಕಾಂಬಿಕೆಗೆ ಭಕ್ತರಿಂದ ಚಿನ್ನದ ಮುಖವಾಡ..! 45 ವರ್ಷಗಳ ಹಿಂದೆ ಹೇಳಿಕೊಂಡಿದ್ದ ಹರಕೆ..!

514

ನ್ಯೂಸ್ ನಾಟೌಟ್: ಕೊಲ್ಲೂರಿನ ಮೂಕಾಂಬಿಕಾ ದೇವಿಗೆ ಭಕ್ತರೊಬ್ಬರು ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ)ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು ಬುಧವಾರ(ಜೂ.11) ಶ್ರೀದೇವಿಗೆ ಸಮರ್ಪಿಸಲಾಯಿತು.

ತುಮಕೂರು ಜಿಲ್ಲೆಯ ಶಿರಾದ ಡಾ| ಕೆ. ಲಕ್ಷ್ಮೀನಾರಾಯಣ ಕುಟುಂಬ ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಬೆಳಗ್ಗೆ ರಥಬೀದಿಯಿಂದ ವಾದ್ಯಘೋಷ ಗಳೊಡನೆ ಚಿನ್ನದ ಮುಖವಾಡವನ್ನು ದೇಗುಲಕ್ಕೆ ತರಲಾಯಿತು. ಅರ್ಚಕ ಕೆ.ಎನ್‌. ಸುಬ್ರಹ್ಮಣ್ಯ ಅಡಿಗ, ನರಸಿಂಹ ಭಟ್‌, ಕಾಳಿದಾಸ್‌ ಭಟ್‌ ನೇತೃತ್ವದಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀದೇವಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತಕುಮಾರ್‌ ಶೆಟ್ಟಿ, ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ, ಸುಧಾ ಮತ್ತಿತರರು ಇದ್ದರು. ಜೂ. 10ರಂದು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ಈ ಮುಖವಾಡಕ್ಕೆ ಶೃಂಗೇರಿ ದೇಗುಲದಲ್ಲಿ ಪೂಜೆ ಸಲ್ಲಿಸಲಾಗಿತ್ತು. ಆಯುರ್ವೇದ ವೈದ್ಯ ಡಾ| ಕೆ.ಲಕ್ಷ್ಮೀನಾರಾಯಣ 45 ವರ್ಷಗಳ ಹಿಂದೆ ಶ್ರೀದೇವಿಗೆ ಚಿನ್ನದ ಮುಖವಾಡವನ್ನು ಸಮರ್ಪಿಸುವ ಬಗ್ಗೆ ಹೇಳಿಕೊಂಡಿದ್ದರು ಎನ್ನಲಾಗಿದೆ.

ಮಹಿಳಾ ಪೇದೆಗೆ ಬೂಟ್ ಕಾಲಿನಿಂದ ಹೆಡ್​ ಕಾನ್ಸ್ ​​ಟೇಬಲ್ ಒದ್ದ ಆರೋಪ..​! ದೂರಿನಲ್ಲೇನಿದೆ..?

See also  ಭಾರತೀಯ ಸೇನೆಯಿಂದ ಹೊಸ ಸೇನಾ ಆಪರೇಷನ್..! ಆಪರೇಷನ್ ಕೆಲ್ಲರ್(Keller)ಗೆ 3 ಉಗ್ರರು ಸಾವು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget