ಚಿಕ್ಕಮಗಳೂರು

70ಕ್ಕೂ ಅಧಿಕ ಮಂದಿಯಿದ್ದ ಬಸ್ಸಿನ ಬ್ರೇಕ್‌ ಫೇಲ್; ಮುಂದೇನಾಯ್ತು?

168

ನ್ಯೂಸ್‌ ನಾಟೌಟ್‌: ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್‌ ಫೇಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ.ಇದರಿಂದಾಗಿ ಸುಮಾರು ೭೦ ಮಂದಿ ಪ್ರಯಾಣಿಕರ ಜೀವ ಉಳಿದಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ಬಸ್ಸಿನ ಬ್ರೇಕ್ ಕಂಟ್ರೋಲ್ ತಪ್ಪಿದೆ. ಕೂಡಲೇ ಚಾಲಕ ಸಂತೋಷ್ ಡಿವೈಡರ್ ಗೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿ, ಚಾಲಕ, ನಿರ್ವಾಹಕ ಸೇರಿದಂತೆ 70 ಕ್ಕಿಂತ ಹೆಚ್ಚು ಪ್ರಯಾಣಿಕರ ಜೀವ ಕಾಪಾಡಿದ್ದಾರೆ.

ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆದ ಹಿನ್ನಲೆ ಚಾಲಕ ಹರಸಾಹಸ ಪಟ್ಟು, ಚಾಲಕನ ಸಮಯ ಪ್ರಜ್ಞೆ ತೋರಿದ್ದಾರೆ. ಬಸ್‌ ಡಿವೈಡರ್ ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಭಾರಿ ಪ್ರಮಾಣದ ಹೊಗೆ ಹೊರ ಬಂದಿದೆ.ಭಯಾನಕ ತಿರುವುಗಳಿಂದಲೇ ಕೂಡಿರುವ ಚಾರ್ಮಾಡಿ ಘಾಟ್ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದಲ್ಲಿದೆ.

See also  ಚಿಕ್ಕಮಗಳೂರು-ಉಡುಪಿ ಜಿಲ್ಲೆಯಗಳಲ್ಲಿ ನಕ್ಸಲರ ಓಡಾಟ..! ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget