ಕೊಯಿನಾಡು ನಾಟಿ ವೈದ್ಯೆ ಪದ್ಮಾವತಿ ಇನ್ನಿಲ್ಲ, ಕಳಚಿದ ನಾಟಿ ವೈದ್ಯಕೀಯ ಕ್ಷೇತ್ರದ ಕೊನೆಯ ಕೊಂಡಿ

4

ಸುಳ್ಯ: ಕೊಯಿನಾಡು ಪದ್ಮಾವತಿ ಆಚಾರ್ಯ ಅವರು ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ಕೊಯಿನಾಡು ಮದ್ದಿನ ಅಜ್ಜಿ ಎಂದೇ ಪ್ರಸಿದ್ದಿ ಪಡೆದ ಇವರು ಅನೇಕ ಜನರ ಬಾಳಲ್ಲಿ ಸಂಜೀವಿನಿಯಾಗಿದ್ದರು. ಕಷ್ಟ ಎಂದು ಬಂದವರಿಗೆ ಹಳ್ಳಿ ಮದ್ದು ಕೊಟ್ಟು ನೆರವಾಗುತ್ತಿದ್ದರು. ನಾಡಿನ ನಾನಾ ಕಡೆಗಳಿಂದ ಬಂದು ನಾಟಿ ವೈದ್ಯೆಯನ್ನು ಭೇಟಿಯಾಗಿ ಔಷಧಿ ಪಡೆದುಕೊಳ್ಳುತ್ತಿದ್ದರು. ಪುತ್ರ ಜಗದೀಶ್ ಆಚಾರ್ಯ, ಪುತ್ರಿಯರಾದ ಶಾರದಾ ಆಚಾರ್ಯ, ಬೇಬಿ ಆಚಾರ್ಯ ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಏನಾಗಿತ್ತು?

ಜ್ವರದಿಂದ ಬಳಲುತ್ತಿದ್ದ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಅಲ್ಲಿಂದ ವೈದ್ಯರ ಸೂಚನೆ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿ ಅಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದ್ಮಾವತಿಯವರು ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo