Latestಕ್ರೈಂರಾಜಕೀಯ

ಕಾಲ್ತುಳಿತ ಪ್ರಕರಣ: KSCA ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್‌ನಿಂದ ರಿಲೀಫ್..! ಎಫ್ ​ಐಆರ್​ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಅಧಿಕಾರಿಗಳು..!

272

ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA)​ ವಿರುದ್ಧ ದಾಖಲಾಗಿದ್ದ ಎಫ್ ​ಐಆರ್​ ರದ್ದು ಕೋರಿ ಕೆಎಸ್ ​ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​​ ಷರತ್ತುಬದ್ಧ ರಿಲೀಫ್​ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ ಐಆರ್ ರದ್ದುಗೊಳಿಸುವಂತೆ ಕೋರಿ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಮತ್ತು ಇತರ ಕೆಲವು ಪದಾಧಿಕಾರಿಗಳು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಎಸ್‌ ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ. ಆದರೆ, ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ. ಈ ಮೂಲಕ ಕೆಎಸ್ ​ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್.ಜೈರಾಮ್‌ ಅವರಿಗೆ ರಿಲೀಫ್ ಸಿಕ್ಕಿದೆ.

ಆರ್ ಸಿಬಿಯ ಚೊಚ್ಚಲ ಐಪಿಎಲ್ ಟ್ರೋಫಿ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.  

ನಾನು 8ನೇ ತರಗತಿಯಲ್ಲಿದ್ದಾಗ ಈ ಸೇತುವೆಗೆ ಅಡಿಪಾಯ ಹಾಕಲಾಗಿತ್ತು ಎಂದ ಜಮ್ಮು – ಕಾಶ್ಮೀರ ಮುಖ್ಯಮಂತ್ರಿ..! ರೈಲ್ವೆ ಸೇತುವೆ ಉದ್ಘಾಟನೆ ವೇಳೆ ಒಮರ್ ಅಬ್ದುಲ್ಲಾ ಹೇಳಿಕೆ..!

See also  'ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ' ಪರಮೇಶ್ವರ್ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ, ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದ್ದು ಪರಮೇಶ್ವರ್ ಎಂದ ಡಿಕೆಶಿ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget