ಕ್ರೈಂ

ಪಡುಬಿದ್ರಿ: ಕೆಎಸ್ಆರ್ ಟಿಸಿ ಬಸ್ ಢಿಕ್ಕಿ, ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು

ಪಡುಬಿದ್ರಿ: ಕೆಎಸ್ಆರ್ ಟಿಸಿ ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವನ್ನಪ್ಪಿದ್ದ ಘಟನೆ ಸೆ. 8 ರ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಪಡುಬಿದ್ರಿ ಬೆಂಗ್ರೆ ನಿವಾಸಿ ಆನಂದ ದೇವಾಡಿಗ (62) ಎಂದು ಗುರುತಿಸಲಾಗಿದೆ. ಆನಂದ ದೇವಾಡಿಗ ಆವರು ಬುಧವಾರ ರಾತ್ರಿ ಪಡುಬಿದ್ರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದಾಗ ಮಂಗಳೂರು ಕಡೆ ಹೋಗುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕೂಲಿ ಕಾರ್ಮಿಕರಾಗಿದ್ದ ಆನಂದ ದೇವಾಡಿಗ ಅವಿವಾಹಿತಾಗಿದ್ದರು. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕೆರೆಗೆ ಹಾರಿ ಯೋಧ ಆತ್ಮಹತ್ಯೆ..! 5 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಆತನ ಸಾವಿನ ಸುತ್ತ ಹಲವು ಅನುಮಾನ..!

ಹೆಲ್ಮೆಟ್ ಹಾಕದ ಪೊಲೀಸರಿಗೂ ದಂಡ ವಿಧಿಸಿದ ಎಸ್.ಪಿ..! ಕರ್ಕಶ ಸೈಲೆನ್ಸರ್ ಗಳನ್ನು ರೋಡ್ ರೋಲರ್ ನಿಂದ ಪುಡಿ ಮಾಡಿಸಿದ ಪೊಲೀಸರು..!

ನಿರಾಶ್ರಿತರ ಡೇರೆಗಳ ಮೇಲೆ ಇಸ್ರೇಲ್ ನಿಂದ ಭೀಕರ ವಾಯುದಾಳಿ, 35 ಮಂದಿ ಸ್ಥಳದಲ್ಲೇ ಸಾವು..! ಈ ಬಗ್ಗೆ ಇಸ್ರೇಲ್ ಹೇಳಿದ್ದೇನು..?