ಬೆಂಗಳೂರು: ರಾಜ್ಯ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರ ಜುಲೈ ತಿಂಗಳ ವೇತನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಒಟ್ಟು 60.82 ಕೋಟಿ ಹಣವನ್ನ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಆದೇಶ ಹೊರಡಿಸಿದ್ದಾರೆ. ಜುಲೈ 2021ರ ಮಾಹೆಯ ವೇತನಕ್ಕಾಗಿ ಮೂಲ ವೇತನ/ತುಟ್ಟಿ ಭತ್ಯೆಯ ಶೇ.25 ರಷ್ಟನ್ನು 2021-22 ನೇ ಸಾಲಿನ ಆಯವ್ಯಯದ ಸಹಾಯಧನದಡಿ ಒದಗಿಸಿರುವ ಅನುದಾನದಡಿ ಒಟ್ಟಾರೆ 60.82 ಕೋಟಿ ರೂ ಹಣ ಬಿಡುಗಡೆಗೊಳಿಸಿದ್ದಾರೆ. ಕೆಎಸ್ ಆರ್ ಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಸಿಬ್ಬಂದಿ ಜುಲೈ ತಿಂಗಳ ಸಂಬಳಕ್ಕಾಗಿ ಶೇಕಡ 25% ರಷ್ಟು ಹಣವನ್ನ ನೀಡಿದೆ. ಕೆಎಸ್ ಆರ್ ಟಿಸಿಗೆ 27.74 ಕೋಟಿ, ವಾಯುವ್ಯ ಸಾರಿಗೆ ನಿಗಮಕ್ಕೆ 17.48 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ 15.61 ಕೋಟಿ ಹಣವನ್ನ ಬಿಡುಗಡೆ ಮಾಡಿದೆ.