ಕೊಡಗು

ಕುಶಾಲನಗರ: ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು !

266

ನ್ಯೂಸ್ ನಾಟೌಟ್: ಕುಶಾಲನಗರದ ಹುದುಗೂರು ಗ್ರಾಮದಲ್ಲಿ ಶನಿವಾರ ಮಾರ್ಚ್ ೧೧ಕ್ಕೆ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಯಡವನಾಡು ಗ್ರಾಮದ ನಿವಾಸಿ 46 ವರ್ಷದ ಪ್ರವೀಣ್ ಮೃತಪಟ್ಟಿದ್ದಾರೆ.

ಪ್ರವೀಣ್‌ ಸಂಜೆ ಹಾರಂಗಿಯಿಂದ ಹುದುಗೂರು ಮಾರ್ಗವಾಗಿ ತಮ್ಮ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಸೋಮವಾರಪೇಟೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕೆಳಗೆ ಬಿದ್ದ ಪ್ರವೀಣ್ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಈ ಸಂಬಂಧ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ದೇವರಕೊಲ್ಲಿ ಬಳಿ ಬಿರುಕು ಬಿಟ್ಟ ರಾಷ್ಟ್ರೀಯ ಹೆದ್ದಾರಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget