ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

156

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಮಂಗಳವಾರ (ನ.12) ರೆಂಜಾಳದ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ವಿನಾಯಕ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಮಾತನಾಡಿ, ಶಿಬಿರಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ, ಸಮಯ ಪ್ರಜ್ಞೆ ಹಾಗೂ ಸೇವಾ ಮನೋಭಾವ ಅರಿಯಲು ಇಂತಹ ಎನ್ ಎಸ್ ಎಸ್ ಶಿಬಿರ ಅವಶ್ಯಕ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ| ಲೀಲಾಧರ್ ಡಿ.ವಿ. ಪ್ರಾಸ್ತಾವಿಕ ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ, ಶ್ರೀ ಕ್ಷೇತ್ರ ರೆಂಜಾಳದ ವ್ಯವಸ್ಥಾಪನ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರಾಘವ ಕಂಜಿಪಿಲಿ, ವ್ಯವಸ್ಥಾಪನ ಸಮಿತಿಯ ನಿಕಟಪೂರ್ವ ಸದಸ್ಯರಾದ ರಾಜೇಶ್ವರಿ ಕುಮಾರಸ್ವಾಮಿ ಹಾಗೂ ಶ್ರೀ ಕ್ಷೇತ್ರ ರೆಂಜಾಳದ ಅನ್ನಪೂರ್ಣ ಸಮಿತಿಯ ಅಧ್ಯಕ್ಷ ಚಿನ್ನಪ್ಪ ಗೌಡ ಬೇರಿಕೆ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು. ಶ್ರೀ ಕ್ಷೇತ್ರ ರೆಂಜಾಳ ಸೇವಾ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು, ಉಪಾಧ್ಯಕ್ಷ ಜಗನ್ಮೋಹನ್ ರೈ ಹೈದಂಗೂರು, ವ್ಯವಸ್ಥಾಪನ ಸಮಿತಿಯ ನಿಕಟಪೂರ್ವ ಸದಸ್ಯರು ರಾಜೇಶ್ವರಿ ಕುಮಾರಸ್ವಾಮಿ, ಸೇವಾ ಸಮಿತಿಯ ಕಾರ್ಯದರ್ಶಿ ಸತೀಶ್ ರಾವ್ ದಾಸರಬೈಲು, ಚೆನ್ನಕೇಶವ ದೋಳ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ, ಕಾಲೇಜಿನ ಶೈಕ್ಷಣಿಕ ಮುಖ್ಯಸ್ಥೆ ಡಾ. ಕವಿತಾ ಬಿಎಂ, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಯೋಜನಾಧಿಕಾರಿ ಡಾ. ಪ್ರಮೋದ ಪಿ.ಎ, ಎನ್ ಎಸ್ ಎಸ್ ಘಟಕದ ನಾಯಕರಾದ ಚೇತನ ಎಂ ಹಾಗೂ ವಿಶ್ವಾಸ್ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಶಿಬಿರದ ತಂಡಗಳಿಗೆ ಪ್ರಶಸ್ತಿ ನೀಡಲಾಯಿತು. ಶಿಬಿರಾರ್ಥಿ ಕಾವ್ಯ ಪ್ರಾರ್ಥಿಸಿ, ವೈಷ್ಣವಿ ಎನ್ ಎಂ ಸ್ವಾಗತಿಸಿ, ಡಾ. ಪ್ರಮೋದ ಪಿ.ಎ. ವಂದಿಸಿದರು. ಅಮೂಲ್ಯ ಸಿ ಹಾಗೂ ಸಂಪತ್ ಕಾರ್ಯಕ್ರಮ ನಿರೂಪಿಸಿದರು.

See also  ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ರಿ.) ವತಿಯಿಂದ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ “ಇಗ್ನೈಟ್ ಕೆರಿಯರ್”
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget