ಕರಾವಳಿಸುಳ್ಯ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ,ದಿ.ಡಾ.ಕೆ.ವಿ.ಜಿ ಜನ್ಮದಿನಾಚರಣೆ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಸುಳ್ಯದ ಅಕ್ಷರ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 95ನೇ ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆಯಿತು.

ಈ ವೇಳೆ ಅಕಾಡೆಮಿ ಆಫ್ ಲಿಬಲರ್ ಎಜ್ಯುಕೇಶನ್ (ರಿ.)ಸುಳ್ಯ ಇದರ ಕೌನ್ಸಿಲ್ ಮೆಂಬರ್ ಶ್ರೀ. ಜಗದೀಶ್ ಅಡ್ತಲೆ ದೀಪ ಬೆಳಗಿಸಿ, ಕುರುಂಜಿ ಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ. ಯವರು ಡಾ.ಕುರುಂಜಿ ವೆಂಕಟ್ರಮಣ ಗೌಡರ ಸಾಧನೆ ಹಾಗೂ ತತ್ವ ಆದರ್ಶಗಳನ್ನು ತಿಳಿಸಿ ಪುಷ್ಪ ನಮನ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಹರ್ಷಿತಾ ಎಂ., ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ, ಕಲಿಕಾ ವೈದ್ಯರುಗಳು ಹಾಜರಿದ್ದು,ದಿ. ಡಾ.ಕುರುಂಜಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತದ ಭೀತಿ

ಸುಳ್ಯ: ಸಂಪಾಜೆಯಲ್ಲಿ ಬಸ್‌-ಕಾರು ಭೀಕರ ಅಪಘಾತ ಪ್ರಕರಣ, ತುರ್ತು ನಿಗಾ ಘಟಕದಲ್ಲಿದ್ದ ಬಾಲಕ ಪ್ರಾಣಾಪಾಯದಿಂದ ಪಾರು

ಇಂದು ಮಧ್ಯಾಹ್ನದ ಭೂಕಂಪದ ತೀವ್ರತೆ 1.8 ದಾಖಲು