ನ್ಯೂಸ್ ನಾಟೌಟ್ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರಿನಲ್ಲಿ ಕೆವಿಜಿ ಕಾನೂನು ಕಾಲೇಜಿನ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ(ಮೇ ೨೬ರಂದು) ನಡೆಯಿತು.”ಸಮತೋಲನ ಪರಿಸರ ಸಮೃದ್ಧಿ ಭವಿಷ್ಯ” ಎಂಬ ದ್ಯೇಯದೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಸರಕಾರಿ ಪ್ರಥಮದರ್ಜೆ ಕಾಲೇಜು ಕೊಡಿಯಾಲಬೈಲು ಇಲ್ಲಿನ ಪ್ರಾoಶುಪಾಲ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು.
ಬಳಿಕ ಮಾತನಾಡಿದ ಅವರು “ವಿದ್ಯಾರ್ಥಿ ಗಳ ಸರ್ವತೋಮುಖ ಏಳಿಗೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪಾತ್ರವನ್ನು ಸವಿವರವಾಗಿ ವಿವರಿಸಿದರು.ಕಾರ್ಯಕ್ರಮದ ಉದ್ಘಾಟ ಕರಾದ ಆಲೆಟ್ಟಿ ಕೃಷಿ ಪತ್ತಿನ ಸಹಕಾರಿ ಸಂಘ ದ ಅಧ್ಯಕ್ಷರಾದ ಜಯಪ್ರಕಾಶ್ ಕುಂಚಡ್ಕ ರವರು “ವಿದ್ಯಾರ್ಥಿ ಗಳ ಸುಪ್ತ ಪ್ರತಿಭೆ ಗಳನ್ನು ಹೊರಹಾಕುವಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪಾತ್ರ”ವನ್ನು ತಿಳಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರು ಇಲ್ಲಿನ ಎಸ್ ಡಿ ಎಮ್ ಸಿ ಅಧ್ಯಕ್ಷ ಸುದರ್ಶನ ಪಾತಿಕಲ್ಲು, ಶಾಲಾ ಶಿಕ್ಷಕಿ ಜಲಜಾಕ್ಷಿ ಕೆ, ಅಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯೆ ಶಂಕರಿ ಕೊಲ್ಲರಮೂಲೆ ,ಆಲೆಟ್ಟಿ ಗ್ರಾಮಪಂಚಾಯತ್ ಸದಸ್ಯ ಸೀತಾರಾಮ ಕೊಲ್ಲರಮೂಲೆ, ಅಂಗನವಾಡಿ ಶಿಕ್ಷಕಿ ರತ್ನಾವತಿ ವಾಲ್ತಾಜೆ ಶಿಬಿರದ ಯಶಸ್ಸಿಗೆ ಶುಭಹಾರೈಸಿದರು. ವಿದ್ಯಾರ್ಥಿನಿ ಶಿಬಿರಾರ್ಥಿ ಕು.ರಮ್ಯಾ ಕೆ ಪ್ರಾರ್ಥಿಸಿದರು. ಎನ್ ಎಸ್ ಎಸ್ ಗೀತೆಯೊಂದಿಗೆ ಮೊದಲ್ಗೊoಡ ಈ ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕಿ, ಉಪನ್ಯಾಸಕಿ ನಯನ ಪಿ.ಯು, ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು.
ವಿದ್ಯಾರ್ಥಿನಿ,ಶಿಬಿರಾರ್ಥಿ ಕು. ಪ್ರಲೋಕ್ಷ ವಂದಿಸಿದರು. ವಿದ್ಯಾರ್ಥಿ ನಿ, ಶಿಬಿರಾರ್ಥಿ ಕು. ಚಂದನ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ದಲ್ಲಿ ಉಪನ್ಯಾಸಕರು, ವಿದ್ಯಾರ್ಥಿ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.