ಶಿಕ್ಷಣಸುಳ್ಯ

ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ, ಡಾ.ಕೆ.ವಿ ಚಿದಾನಂದರಿಂದ ನುಡಿ ನಮನ

143

ನ್ಯೂಸ್ ನಾಟೌಟ್ : ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 11ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಪುಷ್ಪನಮನ ಕಾರ್ಯಕ್ರಮ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜ್‌ನಲ್ಲಿ ಆಗಸ್ಟ್ 07ರಂದು ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಆದ್ಯಕ್ಷರಾದ ಡಾ.ಕೆವಿ ಚಿದಾನಂದ ನುಡಿ ನಮನ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಉಪಾಧ್ಯಕ್ಷರಾದ ಶೋಭಾ ಚಿದಾನಂದ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು.

ಕಾಲೇಜಿನ ಗೌರವ ಪ್ರಾಧ್ಯಾಪಕರಾದ ಡಾ ಶೀಲಾ ಜಿ ನಾಯಕ್,ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಸದಸ್ಯರಾದ ದನಂಜಯ ಮದುವೆಗದ್ದೆ ಉಪಸ್ಥಿತರಿದ್ದರು. ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Click

https://newsnotout.com/2024/08/bangla-desh-news-head-appointed-by-army-kannada-news/
See also  ಸುಳ್ಯ:ದಿ.ಡಾ|ಕುರುಂಜಿ ವೆಂಕಟ್ರಮಣ ಗೌಡರ  95ನೇ ವರ್ಷದ ಜನ್ಮದಿನಾಚರಣೆ: ಕೆವಿಜಿಯವರ ಪುತ್ಥಳಿಗೆ ಮಾಲಾರ್ಪಣೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget