ಕರಾವಳಿಸುಳ್ಯ

ಸುಳ್ಯ : KVG ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಪ್ರಕರಣ,ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

163

ನ್ಯೂಸ್ ನಾಟೌಟ್ : ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಇಂದು ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.ಡಾ.ರೇಣುಕಾ ಪ್ರಸಾದ್ ಸೇರಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.

ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹೈಕೋರ್ಟ್ ನ್ಯಾಯಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಬಸವರಾಜು ಅವರನ್ನೊಳಗೊಂಡ ವಿಭಾಗೀಯ ಪೀಠದಿಂದ ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ.

ಕೆವಿಜಿ ಮೆಡಿಕಲ್ ಕಾಲೇಜು ಆಡಳಿತ ಅಧಿಕಾರಿಯಾಗಿದ್ದ ಪ್ರೊ.ಎ.ಎಸ್ ರಾಮಕೃಷ್ಣ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿದ್ದ ಹೈಕೋರ್ಟ್ ದೋಷಿಗಳೆಂದು ತೀರ್ಪು ನೀಡಿತ್ತು.

ಇದೀಗ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.2011ರ ಏಪ್ರಿಲ್ 28 ರಂದು ಬೆಳಗ್ಗೆ ಅಂಬೆತಡ್ಕ ಬಳಿ ಶ್ರೀ ಕೃಷ್ಣ ಆಯುರ್ವೇದಿಕ್ ಥೆರಪಿ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾ *ಳಿ ನಡೆಸಿದ್ದರು.ಗಂಭೀರ ಗಾಯಗೊಂಡ ಅವರು ಕೊನೆಯುಸಿರೆಳೆದಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು .

See also  ಅರಂತೋಡು: ಜನಮೆಚ್ಚಿದ ಶಿಕ್ಷಕಿಗೆ ಇಡೀ ಊರವರಿಂದಲೇ ವಿದಾಯ ಸಮಾರಂಭ, ಸುಮಾರು 20ಕ್ಕೂ ಹೆಚ್ಚು ಸಂಘ ಸಂಸ್ಥೆಗಳಿಂದ ಸನ್ಮಾನ, ನಿವೃತ್ತ ಜೀವನಕ್ಕೆ ಶುಭಾಶಯಗಳ ಸುರಿಮಳೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget