ಕರಾವಳಿ

ಕೆವಿಜಿ ಸುಳ್ಯ ಹಬ್ಬಕ್ಕೆ ಅದ್ದೂರಿ ಚಾಲನೆ

316

ನ್ಯೂಸ್ ನಾಟೌಟ್ : ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತೋತ್ಸವ ಕೆವಿಜಿ ಹಬ್ಬಕ್ಕೆ ಇಂದು (ಭಾನುವಾರ) ಅದ್ದೂರಿ ಚಾಲನೆ ನೀಡಲಾಯಿತು.

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆಯ ಪ್ರಯಕ್ತ ನಡೆದ ಸಭಾ ಕಾರ್ಯಕ್ರಮವನ್ನು ಚೆನ್ನಕೇಶವ ದೇವಸ್ಥಾನ ಸುಳ್ಯ ಅನುವಂಶಿಕ ಆಡಳಿತ ಮೊಕ್ತೇಸರರು ಡಾ| ಹರಪ್ರಸಾದ ತುದಿಯಡ್ಕ ಉದ್ಘಾಟಿಸಿದರು. ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾಸಂಘ ಗೌರವಾಧ್ಯಕ್ಷರು ಕೆವಿ ಚಿದಾನಂದ ಗೌರವ ಉಪಸ್ಥಿತಿ ವಹಿಸಿದ್ದರು. ನಿವೃತ್ತ ದೈಹಿಕ ಶಿಕ್ಷಕರು ಸುಭಾಶ್ಚಂದ್ರ ರೈ ತೋಟ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ನಂತರ ಯೋಗೇನೆ ಚಿತ್ತಸ್ಯ ಯೋಗ ಕೇಂದ್ರ ಸುಳ್ಯ ಇದರ ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಕ್ರೀಡಾ ಸ್ಪರ್ಧೆ ನಡೆದವು.

See also  2 ಕೋಟಿ ರೂ. ನೋಟು, 50 ಲಕ್ಷ ರೂ. ನಾಣ್ಯಗಳಿಂದ ಗಣಪತಿಗೆ ಶೃಂಗಾರ; ಫೋಟೋಗಳಲ್ಲಿ ನೋಡಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget