Latestಕ್ರೈಂದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

ಲಷ್ಕರ್-ಎ-ತೈಬಾದ ಉಪ ಮುಖ್ಯಸ್ಥ ಕಾಶ್ಮೀರದ ದಾಳಿಯ ಮಾಸ್ಟರ್‌ ಮೈಂಡ್‌..! ಪ್ರವಾಸ ಅರ್ಧದಲ್ಲಿ ಮೊಟಕುಗೊಳಿಸಿ ಸೌದಿಯಿಂದ ಬಂದ ಮೋದಿ ವಿಮಾನ ನಿಲ್ದಾಣದಲ್ಲೇ ತುರ್ತು ಸಭೆ..!

1.1k

ನ್ಯೂಸ್‌ ನಾಟೌಟ್‌: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಹಿಂದೂಗಳ ನರಮೇಧ ಮಾಡಿದ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್ ಎನ್ನುವುದು ದೃಢಪಟ್ಟಿದೆ.

ಪ್ರಧಾನಿ ಮೋದಿಯ ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಪೂರ್ವ ನಿಗದಿ ಕಾರ್ಯಕ್ರಮದ ಪ್ರಕಾರ ಇಂದು(ಎ.23) ರಾತ್ರಿ ಮೋದಿ ಮರಳಬೇಕಿತ್ತು. ಆದರೆ ಪಹಲ್ಗಾಮ್‌ ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಮಂಗಳವಾರ ರಾತ್ರಿಯೇ ಭಾರತದತ್ತ ಪ್ರಯಾಣ ಬೆಳೆಸಿದ್ದರು. ಸೌದಿ ಅರೇಬಿಯಾ ಮಂಗಳವಾರ ರಾತ್ರಿ ಆಯೋಜಿಸಿದ್ದ ಅಧಿಕೃತ ಭೋಜನಕೂಟದಲ್ಲಿ ಮೋದಿ ಭಾಗಿಯಾಗಬೇಕಿತ್ತು. ಆದರೆ ಉಗ್ರರ ದಾಳಿಯ ವಿಚಾರ ತಿಳಿದ ಬಳಿಕ ಪೂರ್ವ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಮೋದಿ ರದ್ದುಗೊಳಿಸಿದ್ದರು. ಈ ಬಗ್ಗೆ ವಿಮಾನ ನಿಲ್ದಾಣದಲ್ಲೇ ತುರ್ತು ಸಭೆ ನಡೆಸಿದರು.

ಈ ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ. ಲಷ್ಕರ್‌ ಸಂಘಟನೆಯ ಟಾಪ್‌ ಕಮಾಂಡರ್‌ ಆಗಿರುವ ಸೈಫುಲ್ಲಾ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಹಿಂದೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ ಸೂತ್ರಧಾರ ಹಫೀಜ್ ಸಯೀದ್‌ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್‌ ಉಗ್ರರು ಭದ್ರತೆ ನೀಡುತ್ತಾರೆ.

ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡವುದರಿಂದ ಸೇನಾ ಅಧಿಕಾರಿಗಳ ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್‌ ನ ಕಂಗನ್‌ ಪುರಕ್ಕೆ ಭೇಟಿ ನೀಡಿದ್ದ. ಕಂಗನ್‌ ಪುರದಲ್ಲಿ ಪಾಕ್‌ ಸೇನೆಯ ದೊಡ್ಡ ಬೆಟಾಲಿಯನ್‌ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ ಎಂಬ ಮಾಹಿತಿ ಲಭಿಸಿದೆ.

ಕಾಶ್ಮೀರದಲ್ಲಿಉಗ್ರರ ದಾಳಿ: ಹೆಲ್ಪ್‌ ಲೈನ್ ಸಂಖ್ಯೆಗಳನ್ನು ಬಿಡುಗಡೆ ಮಾಡಿದ ಸರ್ಕಾರ, ಕನ್ನಡಿಗರ ನೆರವಿಗೆ ತೆರಳಿದ ಸಚಿವ ಸಂತೋಷ್‌ ಲಾಡ್

See also  ಅರಂಬೂರು: ಚಲಿಸುತ್ತಿದ್ದ ಬೈಕ್ ಸ್ಕಿಡ್..! ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಸವಾರನಿಗೆ ಗಂಭೀರ ಗಾಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget