ವೈರಲ್ ನ್ಯೂಸ್

ನಿವೇಶನಕ್ಕಾಗಿ ರಾಷ್ಟ್ರಪತಿಗೆ ಪತ್ರ ಬರೆದ 9ನೇ ತರಗತಿ ವಿದ್ಯಾರ್ಥಿನಿ..! ಪತ್ರದ ವಿಷಯ ತಿಳಿದು ಓಡೋಡಿ ಬಂದ ತಹಶೀಲ್ದಾರ್ ಹೇಳಿದ್ದೇನು?

197

ನ್ಯೂಸ್ ನಾಟೌಟ್ : ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ 9ನೇ ತರಗತಿ ವಿದ್ಯಾರ್ಥಿನಿ ಪತ್ರ ಬರೆದಿದ್ದಾಳೆ. ಹೌದು ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ ಕಳೆದ ತಿಂಗಳು ಜೂ. 29 ರಂದು ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ ಎಂದು ವರದಿ ತಿಳಿಸಿದ್ದಾಳೆ.

ಪತ್ರದಲ್ಲಿ ವಿದ್ಯಾರ್ಥಿನಿ, ನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ ವಾಸಿಸುವುದು ಅನಿವಾರ್ಯವಾಗಿದೆ.

ಇದೀಗ ನಾವು ಆತಂಕದಲ್ಲಿ ಕಾಲ ಕಳೆಯುತ್ತೆದ್ದೇವೆ. ಮನೆ ಕಟ್ಟಲು ಗ್ರಾಮ ಪಂಚಾಯಿತಿ ಅನುದಾನ ಬಿಡುಗಡೆ ಮಾಡಿದರೂ ಮನೆ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ದಯಮಾಡಿ ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿ ಎಂದು ವಿದ್ಯಾರ್ಥಿನಿ ಲಕ್ಷ್ಮೀ ಪತ್ರ ಬರೆದಿದ್ದಾಳೆ. ಇನ್ನು ವಿದ್ಯಾರ್ಥಿನಿ ಲಕ್ಷ್ಮೀಯನ್ನು ಈ ವಿಷಯ ತಿಳಿದು ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ತಕ್ಷಣ ಭೇಟಿ ಮಾಡಿ ಅಹವಾಲು ಆಲಿಸಿ ನಿವೇಶನಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

See also  ದರ್ಶನ್ ಬಳ್ಳಾರಿಗೆ ಶಿಫ್ಟ್ ಆಗುತ್ತಿದ್ದಂತೆ ಶಾಸ್ತ್ರಿ ಸಿನಿಮಾ ರೀ-ರಿಲೀಸ್..! ಕಾರಾಗೃಹದಲ್ಲಿ ಊಟಕ್ಕೆ ಚಿಕನ್, ಚಪಾತಿ, ಮುದ್ದೆ, ಸಾಂಬಾರ್, ಮಜ್ಜಿಗೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget