ಕ್ರೈಂಬೆಂಗಳೂರುವೈರಲ್ ನ್ಯೂಸ್

ಲಾಯರ್ ಜಗದೀಶ್ ಮನೆ ಮೇಲೆ ದಾಳಿ..? ಈ ಬಗ್ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಹೇಳಿದ್ದೇನು..?

172

ನ್ಯೂಸ್ ನಾಟೌಟ್ : ಬಿಗ್ ಬಾಸ್ ​ನಿಂದ ಹೊರ ಬಂದ ಬಳಿಕ ಲಾಯರ್ ಜಗದೀಶ್ ಜನಪ್ರಿಯತೆ ಹೆಚ್ಚಾಗಿದೆ. ಹೀಗಿರುವಾಗಲೇ ತಮ್ಮ ಮನೆಯ ಮೇಲೆ ದಾಳಿ ಪ್ರಯತ್ನ ನಡೆದಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಇಂದು (ಅಕ್ಟೋಬರ್ 25) ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರನ್ನು ಭೇಟಿ ಮಾಡೋದಾಗಿ ಹೇಳಿದ್ದಾರೆ.

“‘ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರನ್ನು ಭೇಟಿ ಮಾಡಬೇಕಿದೆ. ಕಳೆದ ಒಂದೂವರೆ ತಿಂಗಳಲ್ಲಿ ನಡೆದ ಎರಡನೇ ಅಟ್ಯಾಕ್ ಇದು. ಒಂದೂವರೆ ತಿಂಗಳ ಹಿಂದೆ ಸುಮಾರು 25 ಪುಡಾರಿಗಳು ಮನೆ ಹತ್ತಿರ ಬಂದು ದಾಂಧಲೆ ನಡೆಸಿದ್ದರು. 3 ಸಾವಿರ ಜನರನ್ನು ಭೇಟಿ ಮಾಡಿದ್ದೇನೆ, ಆಗ ಏನೂ ಸಮಸ್ಯೆ ಆಗಲಿಲ್ಲ. ಆದರೆ ಮೂರು ಜನರು ಕುಡಿದು ಮನೆ ಮೇಲೆ ಅಟ್ಯಾಕ್ ಮಾಡೋಕೆ ಬಂದರು. ಭದ್ರತಾ ಸಿಬ್ಬಂದಿ ತಡೆಯೋಕೆ ಹೋದರೆ ಅದು ಸಾಧ್ಯವಾಗಿಲ್ಲ’ ಎಂದಿದ್ದಾರೆ.

‘ನಮ್ಮ ಮಗನ ಫೋನ್ ​ನಿಂದ ಪೊಲೀಸರಿಗೆ ಕರೆ ಮಾಡಿದೆವು. ಪೊಲೀಸರು ಬಂದು ಅವರನ್ನು ಕಸ್ಟಡಿಗೆ ತೆಗೆದುಕೊಂಡು ಹೋದರು. ವಶಕ್ಕೆ ಪಡೆದ ವ್ಯಕ್ತಿ ಚನ್ನಪಟ್ಟಣದವನಂತೆ. ಬರೋಕೆ ಹೇಳಿ ಸೆಲ್ಫಿ ತೆಗೆದುಕೊಳ್ಳಬೇಕು ಎಂದು ಅವಾಜ್ ಹಾಕಿದ್ದಾನೆ. ಅಭಿಮಾನ ಓಕೆ ಆದರೆ, ಈ ರೀತಿ ಮನೆಗೆ ನುಗ್ಗೋದು ಎಷ್ಟು ಸರಿ?’ ಎಂದು ಜಗದೀಶ್ ಪ್ರಶ್ನೆ ಮಾಡಿದ್ದಾರೆ.

“ನಮ್ಮಂಥವರು ಈ ರೀತಿ ಹೋರಾಟ ಮಾಡಿದಾಗ ಸೆಕ್ಯುರಿಟಿ ಮೆಶರ್ಸ್ ಏನು ತೆಗೆದುಕೊಂಡಿದ್ದೀರಾ. ಬೆಂಗಳೂರು ಪೊಲೀಸ್ ಆಯುಕ್ತರ ಬಳಿ ಇದಕ್ಕೆ ಏನು ವಿವರಣೆ ಇದೆ. ಈ ಕಾರಣಕ್ಕೆ ಅವರನ್ನು ಭೇಟಿ ಮಾಡುತ್ತಿದ್ದೇನೆ”ಎಂದು ಜಗದೀಶ್ ಹೇಳಿದ್ದಾರೆ.

See also  ಮಂಗಳೂರು: ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಹರಿದ ಕಾರು..! ಓರ್ವ ಯುವತಿ ಬಲಿ, ನಾಲ್ವರು ಗಂಭೀರ, ಚಾಲಕ ನಿಲ್ಲಿಸದೆ ಪರಾರಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget