ನ್ಯೂಸ್ ನಾಟೌಟ್ :ನೆಹರು ಮೆಮೊರಿಯಲ್ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ,ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟ ಖಾತರಿಕೋಶ ಹಾಗೂ ಫ್ರಾಂಕ್ಲಿನ್ ಟೆಂಪಲ್ಟನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಇನ್ವೆಸ್ಟರ್ಸ್ ಅವೇರ್ನೆಸ್ ಎಂಬ ವಿಷಯದ ಬಗ್ಗೆ ಕಾಲೇಜಿನ ಆಡಿಟೋರಿಯಂ ನಲ್ಲಿ ಒಂದು ದಿನದ ಕಾರ್ಯಗಾರವು ನಡೆಯಿತು.
ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ರುದ್ರ ಕುಮಾರ್ ಎಂ.ಎಂ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಚಾಲಕಿ ಡಾ ಮಮತಾ ಕೆ ಹಾಗೂ ವಾಣಿಜ್ಯ ಶಾಸ್ತ್ರ ಸಂಘದ ಸಂಚಾಲಕಿ ದಿವ್ಯ ಟಿ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಅಂತಿಮ ಬಿಕಾಂ ಪದವಿಯ ವಿದ್ಯಾರ್ಥಿನಿಯರಾದ ಲಹರಿ ಸ್ವಾಗತಿಸಿ,ದೀಪ್ತಿ ವಂದನಾರ್ಪಣೆ ಗೈದರು. ವಿದ್ಯಾರ್ಥಿನಿ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು. ಅಂತಿಮ ಬಿಕಾಂ ಪದವಿಯ ವಿದ್ಯಾರ್ಥಿನಿ ಸಿಂಚನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಲಿಯೋ ಅಮಲ್ ಸೀನಿಯರ್ ಬ್ರಾಂಚ್ ಮ್ಯಾನೇಜರ್ ಫ್ರಾಂಕ್ಲಿನ್ ಟೆಂಪಲ್ ಟನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವರು ವಿವಿಧ ಅವಧಿಗಳಲ್ಲಿ ವಿವಿಧ ಹೂಡಿಕೆಗಳ ಬಗ್ಗೆ ಉಪನ್ಯಾಸ ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಧರ ವಿ ಹಾಗೂ ಗೀತಾ ಶೆಣೈ ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಕಾರ್ಯಗಾರವು ಯಶಸ್ವಿಯಾಗಿ ನಡೆಯಿತು.
View this post on Instagram