ಬೆಂಗಳೂರುರಾಜಕೀಯ

ಸರ್ಕಾರವನ್ನು ಎದುರಿಸಲು ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!-ಬಿಜೆಪಿಗೆ ಕಾಂಗ್ರೆಸ್ ಸವಾಲು

190

ನ್ಯೂಸ್ ನಾಟೌಟ್: ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿಎಂ. ಡಿಸಿಎಂ ಆಯ್ಕೆಯಾಗಿದ್ದು,ಸಚಿವ ಸಂಪುಟದ ವಿಸ್ತರಣೆಯೂ ಆಗಿದೆ.ಆದರೆ ಬಿಜೆಪಿ ಮಾತ್ರ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡುವುದರಲ್ಲೇ ದಿನ ಎಣಿಸುತ್ತಿದೆ ಎಂದು ಕಾಂಗ್ರೆಸ್ ಬಿಜೆಪಿಗೆ ಟೀಕೆ ಮಾಡಿದೆ.ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷ ಇಷ್ಟು ಸಮಯ ತೆಗೆದುಕೊಂಡಿರುವುದೇಕೆ ಎಂದು ಲೇವಡಿ ಮಾಡಿದೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ವೊಂದನ್ನು ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು ಹಲವು ಮಂದಿ ಇದಕ್ಕೆ ಪರ ವಿರೋಧದ ಕಾಮೆಂಟ್ ಗಳನ್ನು ಬರೆದಿದ್ದಾರೆ. ಟ್ವಿಟ್ಟರ್ ನಲ್ಲಿ ಸರ್ಕಾರವನ್ನು ಟೀಕಿಸುವ ಮೊದಲು ವಿರೋಧ ಪಕ್ಷದ ನಾಯಕನನ್ನು ನೇಮಿಸುವಂತೆ ಬಿಜೆಪಿಗೆ ಸವಾಲು ಹಾಕಿದೆ.

ಪಕ್ಷದ ಅಧಿಕೃತ ಕರ್ನಾಟಕ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!’ ಎಂದು ಟೀಕಿಸಿದೆ.

ಕರ್ನಾಟಕದ ಜನತೆಗೆ ಭರವಸೆ ನೀಡಿದ್ದ 5 ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗಿದೆ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿರುವಾಗಲೇ ಕಾಂಗ್ರೆಸ್ ಈ ಹೇಳಿಕೆ ನೀಡಿದೆ. ಆಶ್ವಾಸನೆಗಳನ್ನು ಆದಷ್ಟು ಬೇಗ ಜಾರಿಗೊಳಿಸುವಂತೆ ಪ್ರತಿಪಕ್ಷ ನಾಯಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದು,ಇದರ ಬೆನ್ನಲ್ಲೇ ಈ ಟ್ವೀಟ್ ಬಗ್ಗೆ ಬಾರಿ ಕುತೂಹಲ ಮೂಡಿದೆ.

See also  ಪತಿಯಿಂದ ಬೇರ್ಪಟ್ಟದ್ದೇಕೆ ಇಟಲಿ ಪ್ರಧಾನಿ..? ಈ ಬಗ್ಗೆ ಮೆಲೋನಿ ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget