ಕರಾವಳಿರಾಜಕೀಯವೈರಲ್ ನ್ಯೂಸ್

ಏನಿದು ಅಘೋಷಿತ ಲೋಡ್ ಶೆಡ್ಡಿಂಗ್..! ಅಕ್ಕಪಕ್ಕದ ರಾಜ್ಯದಿಂದ ವಿದ್ಯುತ್ ಖರೀದಿಸಿ ಕೊಡಲಿ ಎಂದದ್ದೇಕೆ ಬಿವೈ ರಾಘವೇಂದ್ರ? ಏನಿದು ಜನತೆಗೆ ಕರೆಂಟ್ ಶಾಕ್?

ನ್ಯೂಸ್ ನಾಟೌಟ್ : ಇತ್ತೀಚೆಗೆ ಕರೆಂಟ್ ಸಮಸ್ಯೆಯಿಂದ ದಿನದಲ್ಲಿ ಸೂಚನೆಯೇ ಇಲ್ಲದೆ ಗಂಟೆಗಟ್ಟಲೆ ವಿದ್ಯುತ್ ತೆಗೆಯಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಸಂಸದಬಿವೈ ರಾಘವೇಂದ್ರ ರಾಜ್ಯ ಸರ್ಕಾರ ಗ್ಯಾರಂಟಿ ಕಾರ್ಯಕ್ರಮದ ಮೂಲಕ ಬಡವರ ಜೇಬಿಗೆ ಕನ್ನ ಹಾಕುತ್ತಿದೆ. ಅಘೋಷಿತ ಲೋಡ್ ಶೆಡ್ಡಿಂಗ್ (Load Shedding) ಆರಂಭಗೊಂಡಿದೆ ಎಂದಿದ್ದಾರೆ.

‘ಇದರಿಂದ ರೈತರು (Farmers) ಬೇಸತ್ತಿದ್ದಾರೆ. ಬೆಳೆ ಉಳಿಸಿಕೊಳ್ಳಲು ವಿದ್ಯುತ್ (Electricity) ಸಿಗುತ್ತಿಲ್ಲ. ಅಕ್ಕಪಕ್ಕದ ರಾಜ್ಯದಿಂದ ವಿದ್ಯುತ್ ಖರೀದಿಸಿ ಕೊಡಬೇಕು ಎಂದು ಸಂಸದ ಬಿವೈ ರಾಘವೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ನೆಟ್‌ವರ್ಕ್‌ಗಾಗಿ 300 ಕೋಟಿ ರೂ. ಅನುದಾನ ನೀಡಿದೆ. ಮಲೆನಾಡು ಭಾಗದಲ್ಲಿ ಆದ್ಯತೆ ನೀಡಲಾಗುತ್ತಿದೆ. ಡಿಸೆಂಬರ್ ಒಳಗಾಗಿ 100 ಟವರ್ ಸ್ಥಾಪನೆ ಆಗಲಿದೆ. ಮುಂದಿನ ದಿನಗಳಲ್ಲಿ ಉಳಿದ ಎಲ್ಲಾ ಕಡೆ ಟವರ್ ನಿರ್ಮಿಸಲಾಗುವುದು. ಶಿವಮೊಗ್ಗ ಕ್ಷೇತ್ರದ ಟವರ್‌ಗಳಿಗೆ 100 ಬ್ಯಾಟರಿ ಮಂಜೂರಾಗಿದೆ. ಇದರಿಂದ ಜನರೇಟರ್ ಅವಲಂಬನೆಗೆ ಮುಕ್ತಿ ಸಿಗಲಿದೆ ಎಂದರು. ಇತ್ತೀಚೆಗೆ ರಾಜ್ಯದಲ್ಲಿ ಫ್ರೀ ವಿದ್ಯುತ್ ಘೋಷಣೆಯ ಬಳಿಕ ವಿದ್ಯುತ್ ಶಕ್ತಿ ತೀವ್ರ ಅಭಾವ ಉಂಟಾಗಿದೆ ಎನ್ನಲಾಗಿದೆ.

ರೈತ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಏತ ನೀರಾವರಿ ಮಾಡಿದ್ದೇವೆ. ಶಿಕಾರಿಪುರ ತಾಲೂಕಿನಲ್ಲಿ ಈ ಯೋಜನೆ ಪೂರ್ಣಗೊಂಡಿದೆ. ಈ ಯೋಜನೆಗಳಿಗೆ 24 ಗಂಟೆ ವಿದ್ಯುತ್ ಪೂರೈಸಿದರೆ ಕೆರೆಗಳಿಗೆ ನೀರು ಸಿಗಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ತಜ್ಞರಿಂದ ಅಭಿಪ್ರಾಯ ಪಡೆದು ಹೊಸ ಶಿಕ್ಷಣ ನೀತಿ ಆರಂಭಿಸಿದೆ. ಆದರೆ ರಾಜ್ಯ ಸರ್ಕಾರ ಅದನ್ನು ಕೈಬಿಟ್ಟು ಪ್ರತ್ಯೇಕ ಶಿಕ್ಷಣ ನೀತಿ ಅಳವಡಿಸುತ್ತಿದೆ. ಇದರಿಂದ ಸರ್ಕಾರಿ ಮಕ್ಕಳಿಗೆ ಅನ್ಯಾಯ ಆಗುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳು ತೊಂದರೆ ಅನುಭವಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

Related posts

ಪ್ರವೀಣ್‌ ನೆಟ್ಟಾರು ಹತ್ಯೆಯ ಮೋಸ್ಟ್‌ ವಾಂಟೆಡ್‌ ಆರೋಪಿ ಕೊನೆಗೂ ಸೆರೆ

ಸೂಜಿ ನುಂಗಿ ಒದ್ದಾಡಿದ 7 ವರ್ಷದ ಬಾಲಕ..! ಆಯಸ್ಕಾಂತ ಬಳಸಿ ಶ್ವಾಸಕೋಶದಲ್ಲಿ ಅಂಟಿಕೊಂಡಿದ್ದ ಸೂಜಿಯನ್ನು ಹೊರತೆಗೆದಿದ್ದೇ ರೋಚಕ

ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ ಎಂದದ್ದೇಕೆ ಸಿದ್ದರಾಮಯ್ಯ..? ಇಲ್ಲಿದೆ ಸಂಪೂರ್ಣ ಮಾಹಿತಿ