Latestಕ್ರೈಂಬೆಂಗಳೂರು

ಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿ ಮೇಲೆ ಕಲ್ಲಿನಿಂದ ದಾಳಿ..! ಸಿಬ್ಬಂದಿ ಆಸ್ಪತ್ರೆಗೆ ದಾಖಲು..!

501

ನ್ಯೂಸ್ ನಾಟೌಟ್: ಸಾಲ ಮರುಪಾವತಿಯನ್ನು ಕೇಳಲು ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಕಲ್ಲಿನಿಂದ ತಲೆಗೆ ಹೊಡೆದಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

ಚಂದನ್ ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿ ಎಂದು ಗುರುತಿಸಲಾಗಿದೆ. ರಮೇಶ್ ಎಂಬಾತ ಕಳೆದ ಎರಡು ತಿಂಗಳಿನಿಂದ ಇಎಂಐ ಕಟ್ಟಿರಲಿಲ್ಲ. ಫೋನ್ ಮಾಡಿದರೆ ರಿಸೀವ್ ಮಾಡುತ್ತಿರಲಿಲ್ಲ.

ಕೊನೆಗೆ ಫೋನ್ ರಿಸೀವ್ ಮಾಡಿದ ರಮೇಶ್ ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಬರುವಂತೆ ಸಿಬ್ಬಂದಿಗೆ ಹೇಳಿದ್ದ ಎನ್ನಲಾಗಿದೆ. ಬ್ಯಾಂಕ್ ಸಿಬ್ಬಂದಿ ಸ್ಥಳಕ್ಕೆ ಹೋದ ವೇಳೆ ಲೋನ್ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಮೇಶ್ ಏಕಾಏಕಿ ಅಲ್ಲೇ ಇದ್ದ ಕಲ್ಲಿನಿಂದ ಬ್ಯಾಂಕ್ ಸಿಬ್ಬಂದಿ ಚಂದನ್ ಮೇಲೆ ಕಲ್ಲೂ ತೂರಿ ಎಸ್ಕೇಪ್ ಆಗಿದ್ದಾನೆ.

ಘಟನೆಯಿಂದ ಬ್ಯಾಂಕ್ ಸಿಬ್ಬಂದಿ ಚಂದನ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ಬಾಲರಾಮನ ಹಣೆ ಮೇಲೆ ʼಸೂರ್ಯ ತಿಲಕʼ, ಇಲ್ಲಿದೆ ರಾಮನವಮಿಯ ವಿಶೇಷ ವಿಡಿಯೋ

ಮೋದಿ ಭೇಟಿ ಬೆನ್ನಲ್ಲೇ ಭಾರತದ 11 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ..! ಪಾಕ್ ಜಲಸಂಧಿಯಲ್ಲಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ..!

ರೈಲ್ವೆಯಲ್ಲಿ 1000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ, ಇಲ್ಲಿದೆ ಸಂಪೂರ್ಣ ಮಾಹಿತಿ

ನಳಿನ್ ಕುಮಾರ್ ಕಟೀಲ್‌ ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದ ಡಿಕೆ ಶಿವಕುಮಾರ್..! ಮಧೂರು ದೇವಸ್ಥಾನದಲ್ಲಿ ಡಿಕೆಶಿ ಪ್ರಾರ್ಥನೆ..!

See also  ಸುಳ್ಯ:ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ; "ಬೌದ್ಧಿಕ ಸ್ವತ್ತು ಮತ್ತು ಹಕ್ಕುಗಳ ಅಭ್ಯಾಸ ಮತ್ತು ನಿರ್ವಹಣೆ" ಕುರಿತು ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget