Latest

ಪ್ರೀತ್ಸೆ ಪ್ರೀತ್ಸೆ ಎಂದು 19 ವರ್ಷದ ಯುವತಿಗೆ ಕಿರುಕುಳ ನೀಡುತ್ತಿದ್ದ 42ರ ಅಂಕಲ್! ‘ಫೋಟೋ ಎಡಿಟ್ ಮಾಡುತ್ತೇನೆ’ ಬೆದರಿಕೆಗೆ ಫಿನಾಯಿಲ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

829

 

ನ್ಯೂಸ್‌ ನಾಟೌಟ್:ಪ್ರೀತಿ,ಪ್ರೇಮ,ಮದುವೆ ವಿಷಯದಲ್ಲಿ 42ರ ಅಂಕಲ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದ ಬೆಟಗೇರಿ ಬಾಲಕಿಯರ ವೃತ್ತಿಪರ ಹಾಸ್ಟೆಲ್ ನಲ್ಲಿ ನಡೆದಿದೆ.ಜಿಲ್ಲೆಯ ಮುಂಡರಗಿ ತಾಲೂಕಿನ ವಿರಪಾಪೂರ ತಾಂಡಾದ ನಿವಾಸಿ ವಂದನಾ (19) ಪಿನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ವಂದನಾ ಗದಗದ ಜಿಮ್ಸ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು.ಸಮಾಜ ಕಲ್ಯಾಣ ಇಲಾಖೆ ಬೆಟಗೇರಿ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೆಲ್ ನಲ್ಲಿದ್ದಕೊಂಡೇ ವ್ಯಾಸಂಗ ಮಾಡುತ್ತಿದ್ದಳು.ಈ ವೇಳೆ ಹಾಸ್ಟೇಲ್ ನಲ್ಲಿ ಫಿನಾಯಿಲ್ ಸೇವಿಸಿದ್ದಾಳೆ, ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

19 ವರ್ಷದ ವಂದನಾಗೆ ಅದೇ ಗ್ರಾಮದ 42 ವರ್ಷದ ಕಿರಣ್ ಕಾರಬಾರಿ ಎಂಬಾತ ಪ್ರೀತ್ಸೆ ಪ್ರೀತ್ಸೆ ಎಂದು ಒತ್ತಾಯಿಸುತ್ತಿದ್ದ. ಪ್ರತಿದಿನ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದು, ಮದುವೆ ಆಗದಿದ್ದರೆ ಫೋಟೋ ಎಡಿಟ್ ಮಾಡಿ ಸೊಷಿಯಲ್ ಮೀಡಿಯಾಗೆ ಹಾಕುವುದಾಗಿ ಹೆದರಿಸಿದ್ದ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ.ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆರೋಪಿ ಕಿರಣ್ ಗೆ ಮೊದಲೇ ಯುವತಿ ಮನೆಯವರು ತಾಕೀತು ಮಾಡಿದ್ದರು. ಎರಡು ಮನೆಯ ಕುಟುಂಬಸ್ಥರು ಹೇಳಿದ್ರೂ ಕಿರಣ್ ಕಿರುಕುಳ ನಿಂತಿರಲಿಲ್ಲ. ಇದರಿಂದ ಸಾಕಷ್ಟು ಬೇಸತ್ತು ಹೋಗಿದ್ದಳು. ಹೀಗಾಗಿ ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಕಿರಣ್ ಕಾರಬಾರಿ ಅಂತ ವಿದ್ಯಾರ್ಥಿನಿ ಮನೆಯವರು ದೂರು ನೀಡಿದ್ದಾರೆ.

ದೂರಿನ ಮೇರೆಗೆ ವಿಚಾರಣೆ ನಡೆಸಲಾಗುತ್ತಿದೆ ಅಂತಿದ್ದಾರೆ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ.ಆರೋಪಿಗೆ ತಕ್ಕ ಶಿಕ್ಷೆ ಆಗಬೇಕೆಂದು ಕುಟುಂಬಸ್ಥರ ಆಗ್ರಹವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿ ಕಿರಣ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಗದಗನ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಚಿತ್ರ ನಟಿ ಸೌಂದರ್ಯ ಸಾವಿನ ಬಗ್ಗೆ ಅನುಮಾನ: ಪತಿ ರಘು ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget