ನ್ಯೂಸ್ ನಾಟೌಟ್: ಮಡೆನೂರು ಮನು ಜೈಲಿನಿಂದ ಇಂದು(ಜೂ.7) ರಿಲೀಸ್ ಆಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮನು ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದಾರೆ.
‘ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಬಗ್ಗೆ ಆಡಿಯೋ ನನ್ನದಲ್ಲ, ನಾನು ಶಿವಣ್ಣ, ದರ್ಶನ್ ಮತ್ತು ಧ್ರುವ ಬಗ್ಗೆ ಮಾತನಾಡಿಲ್ಲ, ನಾನು ಮೊದಲು ದೊಡ್ಡವರು (ಶಿವಣ್ಣ) ಭೇಟಿ ಮಾಡಿ ಸತ್ಯವನ್ನು ಅವರಿಗೆ ವಿವರಿಸಿ ಕ್ಷಮೆ ಕೇಳುತ್ತೇನೆ. ನನ್ನ ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು. ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಯ್ತು.’ ಎಂದಿದ್ದಾರೆ.
‘ನನ್ನ ವಿರುದ್ಧ ಪ್ರತಿ ಹಂತದಲ್ಲಿಯು ಷಡ್ಯಂತ್ರ ನಡೆಯಿತು. ಸಿನಿಮಾ ರಿಲೀಸ್ ಗು ಮೊದಲು ಕುಣಿಗಲ್ ಬಳಿ ಮೊಟ್ಟೆ ಹೊಡೆದರು. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದರು. ಕೊನೆಗೆ ನನ್ನ ಜೊತೆಯಲ್ಲಿದ್ದವರೇ ಕೇಸ್ ಮಾಡಿಸಿದ್ರು. ಅದಕ್ಕೂ ಮೊದಲು ರೇಪ್ ಕೇಸ್ ನಲ್ಲಿ ತಪ್ಪಿಸಿಕೊಂಡ್ರು. 50 ಸಾವಿರ ಖರ್ಚು ಮಾಡಿ ಆಡಿಯೋ ರೆಡಿ ಮಾಡಿದ್ದು. ನಿನ್ನ ಕಥೆ ಮುಗಿಸುವುದಾಗಿ ಧಮ್ಕಿ ಹಾಕಿದ್ರು..’ ಎಂದ್ದಿದ್ದಾನೆ.
ಉತ್ತರಾಖಂಡ: ಹೆದ್ದಾರಿಯಲ್ಲೇ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ..! ಮನೆ ಮತ್ತು ಕಾರುಗಳು ಜಖಂ..!
ICU ನಲ್ಲಿ ಮಹಿಳಾ ರೋಗಿಯ ಮೇಲೆ ಸಿಬ್ಬಂದಿಯಿಂಲೇ ಅತ್ಯಾಚಾರ..! ದೂರು ದಾಖಲಿಸಿದ ಪತಿ..!