ಕೊಡಗುಕ್ರೈಂವೈರಲ್ ನ್ಯೂಸ್

ಮಡಿಕೇರಿ:ಸಾಜಿದ್ ಗೆ ಚಾಕುವಿನಿಂದ ಇರಿದ ಶ್ರೀನಿಧಿ..! ಚಿಕಿತ್ಸೆ ಫಲಿಸದೆ ಯುವಕ ಮೃತ್ಯು

166

ನ್ಯೂಸ್‌ ನಾಟೌಟ್‌ : ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಸೋಮವಾರ(ಜ.6) ನಡೆದಿದೆ.

ಮೃತ ಯುವಕನನ್ನು ಮಡಿಕೇರಿ ಗಣಪತಿ ಬೀದಿ‌ ನಿವಾಸಿ ಸಾಜಿದ್ (22) ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಸಾಜಿದ್, ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್​ಗೆ ಬೈಕ್ ಸರ್ವಿಸ್​ ಮಾಡಲೆಂದು ಸಾಜೀದ್ ಆಗಮಿಸಿದ್ದನು. ಈ ವೇಳೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎಂದು ವರದಿ ತಿಳಿಸಿದೆ.

ಆರೋಪಿ ಶ್ರೀನಿಧಿ ಚೂರಿಯಿಂದ ಇರಿದಿದ್ದ ಎನ್ನಲಾಗಿದೆ. ಗಂಭೀರ ಗಾಯಗೊಂಡ ಸಾಜಿದ್ ನನ್ನು ಹೆಚ್ಚಿನ ಚಿಕಿತ್ಸೆಗೆ‌ ಮೈಸೂರಿಗೆ ರವಾನಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿಯನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

See also  ಶಾಸಕ ಮುನಿರತ್ನ ಮನೆಯಲ್ಲಿ ವಶಪಡಿಸಿಕೊಂಡ ಪೆನ್‌ ಡ್ರೈವ್‌ ನಲ್ಲಿ ಹಲವು ರಾಜಕೀಯ ನಾಯಕರ ಖಾಸಗಿ ವಿಡಿಯೋಗಳು ಪತ್ತೆ..! ಲ್ಯಾಪ್‌ಟಾಪ್‌, ಪೆನ್‌ಡ್ರೈವ್‌ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget