ಕರಾವಳಿಕೊಡಗು

ಮಡಿಕೇರಿ:ಇನ್ಮುಂದೆ ಕೊಡಗಿನ ಮುಗಿಲುಪೇಟೆಗೆ ಖಾಸಗಿ ಕಾರು, ಜೀಪು ನಿಷೇಧ – ಜಿಲ್ಲಾಧಿಕಾರಿ, ಎಸ್ಪಿ ಸೂಚನೆ

202

ನ್ಯೂಸ್ ನಾಟೌಟ್ : ಇನ್ಮುಂದೆ ಕೊಡಗಿನ ಮುಗಿಲುಪೇಟೆ (ಮಾಂದಲಪಟ್ಟಿ ) ಪ್ರವಾಸಿ ತಾಣಕ್ಕೆ ಹೋಗುವವರು ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ.ಹೌದು,ಪ್ರವಾಸಿಗರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರವಾಸಿ ತಾಣಕ್ಕೆ ಖಾಸಗಿ (ಬಿಳಿ ಬೋರ್ಡ್‌) ಕಾರು, ಜೀಪ್‌ಗಳಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ.

ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಪ್ರವಾಸೋದ್ಯಮ ಸಮಿತಿ ಸಭೆಯಲ್ಲಿ ಈ ಬಗ್ಗೆ ಸೂಚನೆ ನೀಡಲಾಯಿತು. ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಮಾತನಾಡುತ್ತಾ,”ಇತ್ತೀಚೆಗೆ ನಡೆದ ಕೆಲವು ಘಟನೆಗಳ ಹಿನ್ನೆಲೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮಾಂದಲಪಟ್ಟಿಯಲ್ಲಿ ನಿಯಮದಂತೆ ಪ್ರವಾಸಿ ವಾಹನ (ಹಳದಿ ಬೋರ್ಡ್‌)ಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.ಪ್ರವಾಸೋದ್ಯಮಿಗಳು ಇಲಾಖೆಯೊಂದಿಗೆ ಸಹಕರಿಸಬೇಕು ಎನ್ನುತ್ತಾ,ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಜಿಲ್ಲೆಯ ಪ್ರವಾಸೋದ್ಯಮದ ಹಿತದೃಷ್ಟಿಯಿಂದಾಗಿ ಈ ನಿಯಮಗಳನ್ನು ರೂಪಿಸಲಾಗಿದೆ ಎಂದರು.

See also  ಕಾರ್ಕಳ: ಯುವತಿಯರನ್ನು ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ವ್ಯಕ್ತಿ..! ಕದ್ರಿ ಠಾಣೆ ಪೊಲೀಸರಿಂದ ಅರೆಸ್ಟ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget